Select Your Language

Notifications

webdunia
webdunia
webdunia
webdunia

ಅವಹೇಳನಕಾರಿ ಜಾಹೀರಾತು: ಕಾಂಗ್ರೆಸ್, ಡಿಕೆಶಿ ವಿರುದ್ಧ ಬಿಜೆಪಿ ದೂರು

bjp

Sampriya

ಬೆಂಗಳೂರು , ಶುಕ್ರವಾರ, 19 ಏಪ್ರಿಲ್ 2024 (17:40 IST)
ಬೆಂಗಳೂರು: ಬಿಜೆಪಿ ಬಗ್ಗೆ ಅವಹೇಳನಕಾರಿಯಾಗಿ ಜಾಹೀರಾತು ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಿಯೋಗ ದೂರು ನೀಡಿದೆ.

ಕಾಂಗ್ರೆಸ್ ಪಕ್ಷ ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಅವಹೇಳನಕಾರಿಯಾಗಿ ಜಾಹೀರಾತು ನೀಡಿದೆ. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಇದೀಗ ಚುನಾವನಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಪತ್ರಿಕೆಗಳಲ್ಲಿ ಮಾನಹಾನಿ ಮಾಡುವ ಜಾಹೀರಾತನ್ನು ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ತಕ್ಷಣವೇ ಎಫ್‍ಐಆರ್ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕೂಡಲೇ ಸೂಕ್ತ ನಿರ್ದೇಶನ ಕೊಡುವಂತೆ ಮನವಿ ಆಗ್ರಹಿಸಿದೆ.

ಮನವಿ ಸಲ್ಲಿಸುವ ನಿಯೋಗದಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಮತ್ತು ಪಕ್ಷದ ಪ್ರಮುಖ ನಾಯಕರು ಇದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಪಕ್ಷ ನೋಡಲ್ಲ, ವ್ಯಕ್ತಿ ನೋಡಿ ಪ್ರಚಾರಕ್ಕೆ ಹೋಗುತ್ತಾರೆ: ಸುಮಲತಾ ಅಂಬರೀಶ್