Select Your Language

Notifications

webdunia
webdunia
webdunia
webdunia

ತಮ್ಮ ಸರ್ಕಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ - ಶಾಸಕ ಎಂಟಿಬಿ ನಾಗರಾಜ್

ತಮ್ಮ ಸರ್ಕಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ - ಶಾಸಕ ಎಂಟಿಬಿ ನಾಗರಾಜ್
ಬೆಂಗಳೂರು , ಮಂಗಳವಾರ, 25 ಸೆಪ್ಟಂಬರ್ 2018 (19:06 IST)
ಬೆಂಗಳೂರು : ತಮ್ಮ ಸರ್ಕಾರದಲ್ಲಿ ಪಾರದರ್ಶಕತೆ ಇಲ್ಲ. ತಾರತಮ್ಯ ಮಾಡಲಾಗುತ್ತಿದೆ ಎಂದು ಶಾಸಕ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಶಾಸಕಾಂಗ ಸಭೆಗೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನನಗೆ ಯಾವ ಭರವಸೆಯನ್ನೂ ನೀಡಿಲ್ಲ. ಹೈಕಮಾಂಡ್ ಇದೆ ಮಾತನಾಡೋಣ ಎಂದಿದ್ದಾರೆ. ನನಗೆ ಅಸಮಾಧಾನ ಇರುವುದು ನಿಜ. ಮುಂದೆ ನೋಡಣ ಎಂದು ಹೇಳಿದ್ದಾರೆ.


ನಮ್ಮ ಕ್ಷೇತ್ರ ಅಭಿವೃದ್ಧಿಯಾಗುತ್ತಿಲ್ಲ. ಅನುದಾನ ಸಿಗುತ್ತಿಲ್ಲ. ಈ ಬಗ್ಗೆ ನನಗೆ ಬೇಸರ ಇದೆ. ಸರ್ಕಾರದಲ್ಲಿ ಪಾರದರ್ಶಕತೆ ಇಲ್ಲ, ತಾರತಮ್ಯ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಶಾಸಕ ರೋಷನ್ ಬೇಗ್