Select Your Language

Notifications

webdunia
webdunia
webdunia
webdunia

ವರ್ಗಾವಣೆ ವಿಚಾರದಲ್ಲಿ ಡಿಕೆಶಿ-ಎಚ್ ಡಿ ರೇವಣ್ಣ ಫೈಟ್

ವರ್ಗಾವಣೆ ವಿಚಾರದಲ್ಲಿ ಡಿಕೆಶಿ-ಎಚ್ ಡಿ ರೇವಣ್ಣ ಫೈಟ್
ಬೆಂಗಳೂರು , ಶುಕ್ರವಾರ, 15 ಜೂನ್ 2018 (09:32 IST)
ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ತಮಗೆ ಸಂಬಂಧಪಡದ ಇಲಾಖೆಗಳಲ್ಲಿ ಎಚ್ ಡಿ ರೇವಣ್ಣ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಆಕ್ರೋಶಗೊಂಡಿದ್ದಾರೆ.

ತಮ್ಮ ಗಮನಕ್ಕೆ ಬಾರದೇ ತಮ್ಮ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಸಚಿವ ಡಿಕೆಶಿ, ಸಿಎಂ ಕುಮಾರಸ್ವಾಮಿಯವರಿಗೆ ದೂರವಾಣಿ ಮುಖಾಂತರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಆದರೆ ಡಿಕೆಶಿ ಆರೋಪಕ್ಕೆ ಉತ್ತರಿಸಿರುವ ಎಚ್ ಡಿ ರೇವಣ್ಣ ತನಗೆ ಸಂಬಂಧಪಡದ ಇಲಾಖೆಗಳ ಬಗ್ಗೆ ನಾನೇಕೆ ಹಸ್ತಕ್ಷೇಪ ಮಾಡಲಿ? ವರ್ಗಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದಿದ್ದಾರೆ. ಆದರೆ ಸಮನ್ವಯ ಸಮಿತಿ ಸಭೆಯಲ್ಲೂ ಡಿಕೆಶಿ ಈ ವಿಚಾರ ಪ್ರಸ್ತಾಪಿಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ನಿವಾಸದ ಬಳಿ ಆತಂಕ ಸೃಷ್ಟಿಸಿದ ಹಾರುವ ವಸ್ತು