Select Your Language

Notifications

webdunia
webdunia
webdunia
webdunia

ಜೋಡಿ ಕೊಲೆ ಪ್ರಕರಣ: ಪಾಲಿಕೆ ಮಾಜಿ ಸದಸ್ಯ ಕೋರ್ಟಗೆ ಹಾಜರ್

ಜೋಡಿ ಕೊಲೆ ಪ್ರಕರಣ: ಪಾಲಿಕೆ ಮಾಜಿ ಸದಸ್ಯ ಕೋರ್ಟಗೆ ಹಾಜರ್
ಮೈಸೂರು , ಶುಕ್ರವಾರ, 13 ಜುಲೈ 2018 (16:07 IST)
ಸಾಂಸ್ಕೃತಿಕ ನಗರಿಯನ್ನು ಬೆಚ್ಚಿ ಬೀಳಿಸಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಮಾಜಿ ಸದಸ್ಯ ಕೋರ್ಟಗೆ ಹಾಜರಾಗಿದ್ದಾನೆ.

 ಮೈಸೂರು ಜೋಡಿ ಕೊಲೆ ಪ್ರಕರಣ ಹಿನ್ನಲೆ.ಪ್ರಮುಖ ಆರೋಪಿಗಳ ಜೊತೆ  ಪಾಲಿಕೆ ಮಾಜಿ ಸದಸ್ಯ ಕೋರ್ಟ್‌ಗೆ ಹಾಜರಾಗಿದ್ದಾನೆ. ಜಯಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಕೋರ್ಟ್‌ಗೆ ಹಾಜರು ಪಡಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಅವ್ವ ಮಾದೇಶ್ ಅಲಿಯಾಸ್ ಸಿ.ಮಾದೇಶ್ ನನ್ನು ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.


ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಯಾಗಿತ್ತು. ಪ್ರಮುಖ ಆರೋಪಿಗಳು ಹಾಗೂ ಮಹದೇಶ್‌ಗೆ ಜೈಲು ಶಿಕ್ಷೆಯಾಗಿತ್ತು. ಪ್ರಮುಖ ಆರೋಪಿಗಳ ಜೊತೆ ಅವ್ವ ಮಾದೇಶ್, ಕಾಳ, ಮಂಜ ಸೇರಿದಂತೆ ಇಪ್ಪತ್ತಕ್ಕೂ ಅಧಿಕ ಆರೋಪಿಗಳು ಕೋರ್ಟಗೆ ಹಾಜರು ಪಡಿಸಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ವಿಚಾರಣೆಗಾಗಿ ಪೊಲೀಸರು ಕೋರ್ಟಗೆ ಕರೆತಂದಿದ್ದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಕೆಸರಿನಲ್ಲಿ ಸಿಲುಕಿ ಸಾವು!