Select Your Language

Notifications

webdunia
webdunia
webdunia
webdunia

ರೇಷ್ಮೆ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಸಚಿವರನ್ನು ತರಾಟೆಗೆ ತೆಗೆದುಕೊಂಡವರಾರು?

ರೇಷ್ಮೆ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಸಚಿವರನ್ನು ತರಾಟೆಗೆ ತೆಗೆದುಕೊಂಡವರಾರು?
ಚನ್ನಪಟ್ಟಣ , ಸೋಮವಾರ, 2 ಜುಲೈ 2018 (20:27 IST)
ರೇಷ್ಮೆ ಮಾರುಕಟ್ಟೆಗೆ ರೇಷ್ಮೆ ಸಚಿವ ದಿಢೀರ್ ಭೇಟಿ ನೀಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ರೇಷ್ಮೆ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡು ಸೂಚನೆಗಳನ್ನು ನೀಡಿದರು. ಈ ವೇಳೆ ಸಚಿವ ಸಾ.ರಾ.ಮಹೇಶ್ ಅವರು ರೈತರು ಹಾಗೂ ರೀಲರ್‍ಗಳ ಜತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. 
 
ನೀವು ಬರುತ್ತೀರಿ ಹೋಗುತ್ತೀರಿ ಅಷ್ಟೇ. ನಮ್ಮ ಸಮಸ್ಯೆಗಳು ಪ್ರತಿದಿನ ಇರುತ್ತವೆ ಎಂದು ರೈತರು ಅಳಲನ್ನು ತೋಡಿಕೊಂಡರು. ಈ ವೇಳೆ ರೈತರನ್ನು ಸಚಿವರು ಸಮಾಧಾನಪಡಿಸಿದರು. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿ ಸಚಿವ ಮಹೇಶ್ ತಿಳಿಸಿದರು. 
 
 

Share this Story:

Follow Webdunia kannada

ಮುಂದಿನ ಸುದ್ದಿ

ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ ಶಾಸಕರಾರು ಗೊತ್ತಾ?