Select Your Language

Notifications

webdunia
webdunia
webdunia
webdunia

ರೈತರಿಗೆ ಕಿರುಕುಳ ನೀಡುವ ಬ್ಯಾಂಕ್ ಅಧಿಕಾರಿಗಳಿಗೆ ಜೈಲು: ಸಿಎಂ ಎಚ್ಚರಿಕೆ

ರೈತರಿಗೆ ಕಿರುಕುಳ ನೀಡುವ ಬ್ಯಾಂಕ್ ಅಧಿಕಾರಿಗಳಿಗೆ ಜೈಲು: ಸಿಎಂ ಎಚ್ಚರಿಕೆ
ಕಲಬುರಗಿ , ಸೋಮವಾರ, 17 ಸೆಪ್ಟಂಬರ್ 2018 (19:04 IST)
ಸಾಲ ಕುರಿತ ವಿಚಾರವಾಗಿ ರೈತರಿಗೆ ಕಿರುಕುಳ ನೀಡಿದರೆ ಅಂತಹ ಬ್ಯಾಂಕ್ ಅಧಿಕಾರಿಗಳನ್ನು ಜೈಲಿಗೆ ಹಾಕುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅಫಜಲಪುರ ತಾಲೂಕಿನ ಚೌಡಾಪೂರ ತಾಂಡ ಮತ್ತು ಗಬ್ಬೂರ (ಬಿ) ಗ್ರಾಮದಲ್ಲಿ ಬರ ಹಿನ್ನೆಲೆಯಲ್ಲಿ ಬೆಳೆ ಸಮೀಕ್ಷೆ ನಡೆಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ರೇವೂರ(ಬಿ)ನಲ್ಲಿರುವ ಪ್ರಗತಿ ಕೃಷ್ಣ ಬ್ಯಾಂಕ್ ಅಧಿಕಾರಿ ಸಾಲ ಮರುಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ರೈತ ಮಡಿವಾಳಪ್ಪ ಅಳಲು ತೋಡಿಕೊಂಡಿದ್ದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಸಮಸ್ಯೆ ಬಗೆಹರಿಯಲಿದೆ. ಈ ಬಗ್ಗೆ ಚಿಂತೆ ಮಾಡದಿರಿ ಎಂದು ಧೈರ್ಯ ತುಂಬಿದರು. ಸಾಲದ ಹಣ ಕಟ್ಟುವಂತೆ ರೈತನಿಗೆ ಕಿರುಕುಳ ನೀಡಿದ್ದರಿಂದ ವಿಜಯಪುರದಲ್ಲಿ ಬ್ಯಾಂಕ್ ಅಧಿಕಾರಿಯನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಯಾದಗಿರಿಯಲ್ಲಿ ಹೈ-ಕ ದಿನಾಚರಣೆ ಸಂಭ್ರಮ