Select Your Language

Notifications

webdunia
webdunia
webdunia
webdunia

ಮುಂಬರುವ ಚುನಾವಣೆಯಲ್ಲಿ ಸಚಿವ ಮಹಾದೇವಪ್ಪರಿಂದ ಕ್ಷೇತ್ರ ಬದಲಾವಣೆ

ಮುಂಬರುವ ಚುನಾವಣೆಯಲ್ಲಿ ಸಚಿವ ಮಹಾದೇವಪ್ಪರಿಂದ ಕ್ಷೇತ್ರ ಬದಲಾವಣೆ
ಬೆಂಗಳೂರು , ಶುಕ್ರವಾರ, 29 ಡಿಸೆಂಬರ್ 2017 (15:05 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಬೆಂಗಳೂರಿನ ಸಿ.ವಿ.ರಾಮನ್ ನಗರದಿಂದ ಸ್ಪರ್ಧೆ ಮಾಡಲಿದ್ದಾರೆ.
 
ಟಿ.ನರಸಿಪುರ ಕ್ಷೇತ್ರದಿಂದ ಗೆದ್ದಿರುವ ಮಹಾದೇವಪ್ಪ ಅವರು ಮುಂಬರುವ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
 
ಟಿ.ನರಸಿಪುರ ಕ್ಷೇತ್ರವನ್ನು ಮಹಾದೇವಪ್ಪ ಅವರ ಮಗ ಸುನಿಲ್ ಬೋಸ್ ಅವರಿಗೆ ಬಿಟ್ಟುಕೊಡುವೆ ಬಗ್ಗೆ ಮಾತುಗಳು ಕೇಳಿಬಂದಿವೆ. ಇನ್ನು ಟಿ.ನರಸಿಪುರ ಕ್ಷೇತ್ರ ತೊರೆಯದಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಇತ್ತಕಡೆ ಸಿ.ವಿ.ರಾಮನ್ ಕ್ಷೇತ್ರದ ಕಾರ್ಯಕರ್ತರು ಸಂತೋಷ ವ್ಯಕ್ತಪಡಿಸಿದ್ದಾರೆ. ಮಹಾದೇವಪ್ಪ ಅವರ ಮನೆಯ ಮುಂದೆ ಎರಡು ಕ್ಷೇತ್ರದ ಕಾರ್ಯಕರ್ತರ ದಂಡು ನೆರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ