Webdunia - Bharat's app for daily news and videos

Install App

ಮಾಜಿ ಸಚಿವೆ ಮೋಟಮ್ಮ ಪತಿಯಿಂದ ಬಡ ರೈತ ಕುಟುಂಬದ ಜಮೀನು ಕಬಳಿಸಲು ಹುನ್ನಾರ?

Webdunia
ಬುಧವಾರ, 5 ಸೆಪ್ಟಂಬರ್ 2018 (15:01 IST)
ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಮೋಟಮ್ಮ ಪತಿ ವೆಂಕಟರಾಮು ಎನ್ನುವವರು ಬಡ ರೈತ ಕುಟುಂಬದ ಜಮೀನು ಕಬಳಿಸಲು ಹುನ್ನಾರ ನಡೆಸಿರುವ ಆರೋಪ ಮಂಡ್ಯದಲ್ಲಿ ಕೇಳಿ ಬಂದಿದೆ.

ಕ್ರಿಮಿನಲ್ ಪ್ರಕರಣವೊಂದರಲ್ಲಿ ರಾಜಿಯಾಗದಿದ್ದರೆ ನಿಮ್ಮ ಜಮೀನು ವಶಪಡಿಸಿಕೊಳ್ಳುವ ಬೆದರಿಕೆ ಹಾಕಿದ್ದು, ಮೋಟಮ್ಮ ಕುಟುಂಬದ ಬೆದರಿಕೆಯಿಂದ ಕುಟುಂಬವೊಂದು ದಯಾಮರಣಕ್ಕೆ ಅಂಗಲಾಚಿದೆ. ತನ್ನ ಸಂಬಂಧಿಗಳು ಆರೋಪಿಗಳಾಗಿರುವ ಕ್ರಿಮಿನಲ್ ಪ್ರಕರಣವೊಂದನ್ನು ರಾಜಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ ತೋಟಿ ಇನಾಮ್ತಿಯಲ್ಲಿ ಜಮೀನು ಮಂಜೂರಾಗಿದ್ದು, ಜಂಟಿ ಖಾತೆಯಲ್ಲಿರುವ ಜಮೀನಿನಲ್ಲಿ ಬೇಸಾಯಕ್ಕೆ ಅವಕಾಶ ಕೊಡಲ್ಲ ಎಂದು ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಮೋಟಮ್ಮ ಪತಿ ವೆಂಕಟರಾಮು ತಮ್ಮ ಸಹೋದರ ಸಂಬಂಧಿ ನಾಗರಾಜು ಕುಟುಂಬಕ್ಕೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇಂಥದ್ದೊಂದು ಪ್ರಕರಣ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದ್ದು, ಮಾಜಿ ಸಚಿವೆ ಮೋಟಮ್ಮ ಅವರ ಪತಿ ವೆಂಕಟರಾಮು ತಮಗೆ ಕಿರುಕುಳ ಕೊಡ್ತಿದ್ದಾರೆ. ಹೀಗಾಗಿ ದಯಾ ಮರಣ ನೀಡಿ  ಎಂದು ವೆಂಕಟರಾಮು ಅವರ ದಾಯಾದಿ ಕುಟುಂಬದ ಎಸ್.ನಾಗರಾಜು, ಪತ್ನಿ ಚಂದ್ರಮ್ಮ ಹಾಗೂ ಪುತ್ರ ಶಿವಶಂಕರ್ ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments