Webdunia - Bharat's app for daily news and videos

Install App

ಸಂತ್ರಸ್ತರಿಗೆ ಉಚಿತ ಶಿಕ್ಷಣ ಮುಂದಾದ ಮುಖಂಡ

Webdunia
ಮಂಗಳವಾರ, 28 ಆಗಸ್ಟ್ 2018 (13:38 IST)
ಕೊಡಗು ನೆರೆ ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ರಾಜ್ಯದ ವಿವಿಧೆಡೆ ದಾನಿಗಳು ಮುಂದಾಗಿದ್ದಾರೆ. ಏತನ್ಮಧ್ಯೆ ಸಂತ್ರಸ್ತರ ಕುಟಂಬಗಳ ಮಕ್ಕಳಿಗೆ ಮಾಜಿ ಸಚಿವರೊಬ್ಬರು ಉಚಿತ ಶಿಕ್ಷಣ ನೀಡಲು ಮುಂದಾಗಿದ್ದಾರೆ.

ಮಾಜಿ ಸಚಿವ ಹಾಗೂ ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಚೆನ್ನಿಗಪ್ಪಾ, ಕೊಡಗು ನೆರೆ ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ಮುಂದಾಗಿದ್ದಾರೆ. ತಮ್ಮ ಒಡೆತನದ ವಿದ್ಯಾಸಂಸ್ಥೆಯಲ್ಲಿ ಸಂತ್ರಸ್ತರ ಕುಟುಂಬದ 100 ಮಕ್ಕಳಿಗೆ ಉಚಿತ ವಸತಿ ಶಿಕ್ಷಣ ನೀಡುವುದಾಗಿ ಘೋಷಿಸಿದ್ದಾರೆ. 

ನೆಲಮಂಗಲ ಬಳಿ ಇರುವ ಶಿವಕುಮಾರ ಮಹಾಸ್ವಾಮೀಜಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ಎಂಜಿನಿಯರಿಂಗ್  30, ಎಂಟೆಕ್  20, ಪಾಲಿಟೆಕ್ನಿಕ್  50 ಸೀಟ್ ಒಟ್ಟು 100 ಮಕ್ಕಳಿಗೆ ವಸತಿ ಶಿಕ್ಷಣ ನೀಡಲು ಮುಂದಾಗಿದ್ದಾರೆ.

ಈ ಮೂಲಕ ಕೊಡಗು ಸಂತ್ರಸ್ತ ಕುಟುಂಬದ ಮಕ್ಕಳಿಗೆ ಶೈಕ್ಷಣಿಕವಾಗಿ‌ ನೆರವಾಗಲು ಮುಂದಾಗಿದ್ದಾರೆ. ಶಿವಕುಮಾರಸ್ವಾಮಿಗಳ ಆಶೀರ್ವಾದ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮಾರ್ಗರ್ಶನ ದಿಂದ ನಡೆದು ಬಂದಿದ್ದೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಮಾಡುತ್ತಿರುವ ಜನಸೇವೆಗೆ ನಾನು ಸಹಕಾರ  ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ಚೆನ್ನಿಗಪ್ಪಾ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments