Select Your Language

Notifications

webdunia
webdunia
webdunia
webdunia

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಪರಮೇಶ್ವರ್

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಪರಮೇಶ್ವರ್
ಬೆಂಗಳೂರು , ಗುರುವಾರ, 28 ಜೂನ್ 2018 (13:15 IST)
ಬೆಂಗಳೂರು: ಸಿದ್ದರಾಮಯ್ಯ ಹೇಳಿಕೆಯಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಪರಮೇಶ್ವರ್ ಮುಂದಾಗಿದ್ದಾರೆ.

‘ಸಿದ್ದರಾಮಯ್ಯ ನಮ್ಮ ಸಮನ್ವಯ ಸಮಿತಿ ಅಧ್ಯಕ್ಷರು. ಅವರಿಗೆ ತಮ್ಮ ಜವಾಬ್ಧಾರಿ ಗೊತ್ತಿದೆ. ಅವರು ಏನೋ ಹೇಳಿದರೆ ಅದನ್ನು ಇನ್ಯಾರೋ ಬೇರೆ ರೀತಿ ತಿರುಚಿದ್ದಾರೆ’ ಎಂದು ಪರಮೇಶ್ವರ್ ಸಮಜಾಯಿಷಿ ನೀಡಿದ್ದಾರೆ.

ಅಷ್ಟೇ ಅಲ್ಲದೆ, ಜೂನ್ 30 ರಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಆಗ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ಸಿಗರು ವಂದೇ ಮಾತರಂ ತಿರಸ್ಕರಿಸಿದರು: ಅಮಿತ್ ಶಾ ಆರೋಪ