Select Your Language

Notifications

webdunia
webdunia
webdunia
webdunia

ಸರಕಾರದ ಸ್ಥಿರತೆ: ಅನುಮಾನ ಬೇಡ ಎಂದ ಸಿಎಂ

ಸರಕಾರದ ಸ್ಥಿರತೆ: ಅನುಮಾನ ಬೇಡ ಎಂದ ಸಿಎಂ
ನವದೆಹಲಿ , ಗುರುವಾರ, 30 ಆಗಸ್ಟ್ 2018 (18:42 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದ ಸ್ಥಿರತೆ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರಕಾರ ಸುಭದ್ರವಾಗಿದೆ. ಸ್ಥಿರ ಹಾಗೂ ಸುಭದ್ರ ಆಡಳಿತ ನೀಡಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ಸಮ್ಮಿಶ್ರ ಸರಕಾರ ಆಡಳಿತ ನಡೆಸಲಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ ಎಂದಿರುವ ಹೆಚ್.ಡಿ.ಕೆ., ಅವರ ಹೇಳಿಕೆಯನ್ನು ತಿರುಚುವುದು ಅಥವಾ ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಆಟವಾಡುತ್ತಿದ್ದ ಮಗು ಕಾಲುವೆಗೆ ಬಿದ್ದು ಸಾವು!