Select Your Language

Notifications

webdunia
webdunia
webdunia
webdunia

ಚೆನ್ನೈನಲ್ಲಿ ಇಂದು ಭಾರೀ ಮಳೆ: ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ

ಚೆನ್ನೈನಲ್ಲಿ ಇಂದು ಭಾರೀ ಮಳೆ: ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ
ಬೆಂಗಳೂರು , ಗುರುವಾರ, 22 ನವೆಂಬರ್ 2018 (10:13 IST)
ಬೆಂಗಳೂರು: ಚೆನ್ನೈ ಮತ್ತು ಕಾಂಚೀಪುರಂನಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆ ಹಿನ್ನಲೆಯಲ್ಲಿ ಅಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರಿನಲ್ಲೂ ಇಂದು ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಸಣ್ಣಗೆ ಹನಿ ಮಳೆಯಾಗುತ್ತಿದೆ. ಗಜ ಚಂಡಮಾರುತದಿಂದ ತತ್ತರಿಸಿದ್ದ ತಮಿಳುನಾಡಿಗೆ ಇದು ಮತ್ತೊಂದು ಆಘಾತವಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ವಾತಾವರಣದಲ್ಲಿ ಈ ಬದಲಾವಣೆಯಾಗಿದೆ. ದಿಡೀರ್ ಮಳೆಯಿಂದಾಗಿ ತಮಿಳುನಾಡಿನಲ್ಲಿ ಗಜ ಚಂಡಮಾರುತ ಪರಿಹಾರ ಕಾರ್ಯಕ್ಕೂ ಅಡಚಣೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಬಾಗಲಕೋಟೆಯ ರೈತ ದೂರಿದ್ದೇನು?