Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್

ರಮೇಶ್ ಜಾರಕಿಹೊಳಿಗೆ ದೆಹಲಿಗೆ ಬರುವಂತೆ  ಹೈಕಮಾಂಡ್ ಬುಲಾವ್
ಬೆಂಗಳೂರು , ಗುರುವಾರ, 20 ಡಿಸೆಂಬರ್ 2018 (12:48 IST)
ಬೆಂಗಳೂರು : ಬಿಜೆಪಿ ಭೋಜನಕೂಟದಲ್ಲಿ ಭಾಗವಹಿಸಿದ ಸಚಿವ ರಮೇಶ್ ಜಾರಕಿಹೊಳಿಗೆ ಇದೀಗ ದೆಹಲಿಗೆ ಬರುವಂತೆ  ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ.


ನಿನ್ನೆ ರಾತ್ರಿ ಬಿಜೆಪಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಆಯೋಜಿಸಿದ್ದ ಭೊಜನ ಕೂಟದಲ್ಲಿ ಪಾಲ್ಗೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪಕ್ಕದಲ್ಲೇ ಕುಳಿತು ರಾತ್ರಿಯ ಭೋಜನ ಸ್ವೀಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಇದೀಗ ದೆಹಲಿಗೆ ಬರುವಂತೆ ರಮೇಶ್ ಜಾರಕಿಹೊಳಿಗೆ ಕೆ.ಸಿ.ವೇಣುಗೋಪಾಲ್  ಸೂಚನೆ ನೀಡಿದ್ದಾರೆ.


ಈ ಹಿನ್ನಲೆಯಲ್ಲಿ ಇಂದು ರಾತ್ರಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಲಿದ್ದು, ಅವರ ಜೊತೆ ವೇಣುಗೋಪಾಲ್ ಸಂಪುಟ ಆಯ್ಕೆ ಸಂಬಂಧ ಮಾತುಕತೆ ನಡೆಸಲಿದ್ದಾರೆ. ಹಾಗೂ  ರಮೇಶ್ ಜಾರಕಿಹೊಳಿಯನ್ನು ಲೋಕಸಭೆಗೆ ಸ್ಪರ್ಧಿಸುವಂತೆ ಮನವೊಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಾಯಕರ ಕಾರ್ಯಕ್ರಮಕ್ಕೆ ಗೈರಾದ ರಮೇಶ್ ಜಾರಕಿಹೊಳಿ ಬಿಜೆಪಿ ಭೋಜನಕೂಟಕ್ಕೆ ಹಾಜರು