Select Your Language

Notifications

webdunia
webdunia
webdunia
webdunia

ವಿಧಾನಸೌಧದಲ್ಲಿ ಬಿಜೆಪಿ ನಾಯಕರಿಂದ ಹೈಡ್ರಾಮಾ

bjp protest

geetha

bangalore , ಬುಧವಾರ, 7 ಫೆಬ್ರವರಿ 2024 (14:00 IST)
ಬೆಂಗಳೂರು-ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದೆ.ಡಿಕೆ ಸುರೇಶ ದೇಶ ವಿಭಜನೆ ಹೇಳಿಕೆ, ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡದೆ ಇರುವುದನ್ನು ಸೇರಿ ಹಲವು ವಿಚಾರ ಮುಂದಿಟ್ಟು ಬಿಜೆಪಿ ಪ್ರತಿಭಟನೆ ನಡೆಸಿ ವ್ಯಾಪಕ ಆಕ್ರೋಶ ಹೊರಹಾಕಿದೆ.ಇನ್ನೂ ಪ್ರತಿಭಟನೆಯಲ್ಲಿ ಆರ್ ಅಶೋಕ್, ವಿಜಯೇಂದ್ರ, ಮಾಜಿ ಸಚಿವ ಸುರೇಶ್ ಕುಮಾರ್, ಸೇರಿ ಶಾಸಕರು, ಎಂಎಲ್ ಸಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ನಗರದ ವಿಧಾನಸೌಧದಲ್ಲಿ ಬಿಜೆಪಿ ನಾಯಕರಿಂದ ಹೈ ಡ್ರಾಮಾ ನಡೆದಿದೆ.ಸಿಎಂ ಸಿದ್ದರಾಮಯ್ಯ ಕಚೇರಿಗೆ ಬೀಗ ಜಡಿಯಲು ಬಿಜೆಪಿ ಮುಂದಾಗಿದೆ.ಬೀಗದ ಕೀಲಿ ಕೈಯಲ್ಲಿದೆ ಇಡಿದು ಸಿಎಂ ಕಚೇರಿ ಮುತ್ತಿಗೆಗೆ ಬಿಜೆಪಿ ಮುಂದಾಗಿದ್ದು,ಈ ವೇಳೆ ಮಾರ್ಗ ಮದ್ಯದಲ್ಲೇ ಪೊಲೀಸರು ತಡೆದಿದ್ದಾರೆ.ವಿಧಾನಸೌಧ ಒಳಗೆ ನುಗ್ಗುಲು ಯತ್ನಿಸಿದ ಬಿಜೆಪಿ ನಾಯಕರನ್ನು ತಡೆದು  ಪೊಲೀಸರು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮಗೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ: ಕೇಂದ್ರದ ವಿರುದ್ಧ ಸಿಎಂ ಸಿದ್ದು ವಾಗ್ದಾಳಿ