Select Your Language

Notifications

webdunia
webdunia
webdunia
webdunia

ಅಯ್ಯೋ… ಸುಳ್ಳು ದೂರಿಗೆಲ್ಲಾ ಹೆದರಕ್ಕಾಗುತ್ತಾ?: ಸಿಎಂ ಸಿದ್ದರಾಮಯ್ಯ

ಅಯ್ಯೋ… ಸುಳ್ಳು ದೂರಿಗೆಲ್ಲಾ ಹೆದರಕ್ಕಾಗುತ್ತಾ?: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 4 ಸೆಪ್ಟಂಬರ್ 2017 (10:48 IST)
ಬೆಂಗಳೂರು: ನೂರಾರು ಕೋಟಿ ರೂ. ಬೇನಾಮಿ ಆಸ್ತಿ ಹೊಂದಿದ್ದಾರೆಂದು ತಮ್ಮ ವಿರುದ್ಧ ಆರ್ ಟಿ ಐ ಕಾರ್ಯಕರ್ತ ರಾಮಮೂರ್ತಿ ನೀಡಿದ ದೂರಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ‘ಅಯ್ಯೋ… ಯಾರೋ ನೀಡಿದ ಸುಳ್ಳು ದೂರಿಗೆಲ್ಲಾ ಹೆದರುತ್ತಾ ಕೂರಕ್ಕಾಗುತ್ತಾ?’ ಎಂದು ಪ್ರತಿಕ್ರಿಯಿಸಿದ್ದಾರೆ.

ಐಟಿಯವರು ತನಿಖೆ ನಡೆಸಲಿ ಆಮೇಲೆ ನೋಡೋಣ ಏನಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆರ್ ಟಿಐ ಕಾರ್ಯಕರ್ತ ರಾಮಮೂರ್ತಿ ಮುಖ್ಯಮಂತ್ರಿ ನೂರಾರು ಕೋಟಿ ರೂ. ಬೇನಾಮಿ ಆಸ್ತಿ ಹೊಂದಿದ್ದಾರೆಂದು 1638 ಪುಟಗಳ ವರದಿಯನ್ನು ಐಟಿ ಇಲಾಖೆಗೆ ಸಲ್ಲಿಸಿದ್ದರು.

ಇದಕ್ಕೆ ಸ್ಪಂದಿಸಿರುವ ಐಟಿ ಇಲಾಖೆ ಸಿಎಂ ವಿರುದ್ಧ ತನಿಖೆಗೆ ಮುಂದಾಗಿದೆ. ಇದರ ಬಗ್ಗೆ ಐಟಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಮಂಗಳೂರಿನಲ್ಲಿ ಮತ್ತಷ್ಟು ಯುವಕರ ಪ್ರಾಣ ತೆಗೆಯಲು ಬಿಜೆಪಿ ಸಂಚು: ಯುಟಿ ಖಾದರ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನಲ್ಲಿ ಮತ್ತಷ್ಟು ಯುವಕರ ಪ್ರಾಣ ತೆಗೆಯಲು ಬಿಜೆಪಿ ಸಂಚು: ಯುಟಿ ಖಾದರ್