Select Your Language

Notifications

webdunia
webdunia
webdunia
webdunia

ಕಿಡಿಗೇಡಿಗಳು ಬೆಂಕಿ ಹಚ್ಚಿದ್ದೆಲ್ಲಿ?

ಕಿಡಿಗೇಡಿಗಳು ಬೆಂಕಿ ಹಚ್ಚಿದ್ದೆಲ್ಲಿ?
ನಂಜನಗೂಡು , ಬುಧವಾರ, 6 ಮಾರ್ಚ್ 2019 (18:58 IST)
ಕಳೆದ ವಾರದ ಘಟನೆ ರಾಜ್ಯದ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕಿಡಿಗೇಡಿಗಳ ಮತ್ತೆ ಬೆಂಕಿ ಇಟ್ಟಿದ್ದಾರೆ.
ಕಿಡಿಗೇಡಿಗಳಿಂದ ಅರಣ್ಯಕ್ಕೆ ಬೆಂಕಿ ಇಟ್ಟ ಪರಿಣಾಮ ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.

ಕೋಣನೂರು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹತ್ತಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ 9 ರ ಸಮಯದಲ್ಲಿ ಅರಣ್ಯ ಪ್ರದೇಶಕ್ಕೆ ನುಗ್ಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಪ್ರದೇಶದ ಸುತ್ತಲೂ ಬೆಂಕಿ ರೇಖೆ ನಿಮಾ೯ಣ ಮಾಡಲಾಗಿದ್ದು ಒಳನುಗ್ಗಿ ಕೃತ್ಯವೆಸಗಿರುವ ಕಿಡಿಗೇಡಿಗಳು ಸಸ್ಯಸಂಪತ್ತಿಗೆ ಸಂಚಕಾರ ತಂದಿದ್ದಾರೆ. ಸ್ಥಳದಲ್ಲಿ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು.




Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ರಿಮೋಟ್ ಕಂಟ್ರೋಲ್ ಯಾರು?