Select Your Language

Notifications

webdunia
webdunia
webdunia
webdunia

ರಾಮಮಂದಿರ ನಿರ್ಮಾಣದ ಸುಗ್ರೀವಾಜ್ಞೆ ಹೊರಡಿಸಲು ಒತ್ತಾಯ

ರಾಮಮಂದಿರ ನಿರ್ಮಾಣದ ಸುಗ್ರೀವಾಜ್ಞೆ ಹೊರಡಿಸಲು ಒತ್ತಾಯ
ಹುಬ್ಬಳ್ಳಿ , ಮಂಗಳವಾರ, 13 ನವೆಂಬರ್ 2018 (19:12 IST)
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ದಿನೇ ದಿನೇ ವಿಳಂಬವಾಗುತ್ತಿದ್ದು, ರಾಮಮಂದಿರ ನಿರ್ಮಾಣದ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ನ ರಾಷ್ಟ್ರೀಯ ಸಂಘಟನಾ ಮುಖಂಡ ಮಿಲಿಂದ ಪರಾಂಡೆ ಆಗ್ರಹಿಸಿದ್ದಾರೆ. 

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಕಳೆದ ತಿಂಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಕೇವಲ ನಾಲ್ಕೈದು ನಿಮಿಷಗಳ ಸಮಯ ನೀಡಲಾಗಿತ್ತು. ಆದ್ರೆ  ನ್ಯಾಯಾಲಯದ ತೀರ್ಪು ಪ್ರಕಟವಾಗುವ ವರೆಗೂ ಕಾಯುತ್ತಾ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿಟ್ಟಿನಲ್ಲಿ ಇದೇ ನವೆಂಬರ್ 25 ರಂದು ನಗರದ ಮೂರುಸಾವಿರ ಮಠದ ಆವರಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ರಾಜ್ಯದ ಹಲವು ಮಠಾದೀಶರು, ಸಮಾಜ ಚಿಂತಕರು ಸೇರಿದಂತೆ ನೂರಾರು ಜನ ಭಾಗವಹಿಸಲಿದ್ದು, ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗುವದು ಎಂದರು.

 


Share this Story:

Follow Webdunia kannada

ಮುಂದಿನ ಸುದ್ದಿ

ಸಮ್ಮಿಶ್ರ ಸರಕಾರದ ವಿರುದ್ಧ ರೆಡ್ಡಿ ಬೆಂಬಲಿಗರು ಹೇಳುತ್ತಿರೋದು ಏನು ಗೊತ್ತಾ?