Select Your Language

Notifications

webdunia
webdunia
webdunia
webdunia

ಚಲುವರಾಯ ಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ

ಚಲುವರಾಯ ಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ
ಬೆಂಗಳೂರು , ಭಾನುವಾರ, 29 ಏಪ್ರಿಲ್ 2018 (09:34 IST)
ಬೆಂಗಳೂರು: ನಾಗಮಂಗಲ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಲುವರಾಯ ಸ್ವಾಮಿ ಆಪ್ತನ ಮನೆ ಮೇಲೆ ಇಂದು ಬೆಳ್ಳಂ ಬೆಳಿಗ್ಗೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜೆಡಿಎಸ್ ನಿಂದ ಬಂಡಾಯವೆದ್ದು ಕಾಂಗ್ರೆಸ್ ಪಾಳಯ ಸೇರಿಕೊಂಡಿರುವ ಚಲುವರಾಯ ಸ್ವಾಮಿ ಆಪ್ತ ಸುಖಧರೆಯ ಲಕ್ಷ್ಮೀನಾರಾಯಣ ಎಂಬವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.

ತಪಾಸಣೆ ನಡೆಸಿದ ಅಧಿಕಾರಿಗಳಿಗೆ ಸುಮಾರು 30 ಸಾವಿರ ರೂ ನಗದು ಸಿಕ್ಕಿದ್ದು, ವಿಚಾರಣೆ ನಡೆಸಿದ ಬಳಿಕ ಅದನ್ನು ಮರಳಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ