Select Your Language

Notifications

webdunia
webdunia
webdunia
webdunia

ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!

ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!
ಬೆಂಗಳೂರು , ಸೋಮವಾರ, 5 ಫೆಬ್ರವರಿ 2018 (12:56 IST)
ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ  ಹೇಳಿಕೆಗಳನ್ನು ಮಾಜಿ ಸಂಸದೆ ರಮ್ಯಾ ಅವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಶಾಸಕ ಜಮೀರ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


‘ಪ್ರಧಾನ ಮಂತ್ರಿಗಳಿಗೆ ಯಾರೇ ಆದರೂ ಗೌರವ ಕೊಡಬೇಕು. ಈ ರೀತಿ ಮಾತನಾಡಬಾರದು’ ಅಂತ ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಮೋದಿ ಕೇವಲ ರಾಜಕೀಯ ಭಾಷಣ ಮಾಡಿ ಹೋಗಿದ್ದಾರೆ. ಮಹದಾಯಿ ಬಗ್ಗೆ ಒಂದೇ ಒಂದು ಶಬ್ಧ ಮಾತನಾಡಿಲ್ಲ. ಯಾರ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ ಗೊತ್ತಿಲ್ಲ. ಯಡಿಯೂರಪ್ಪ ಅವರನ್ನ ಪಕ್ಕದಲ್ಲಿ ಕೂರಿಸಿಕೊಂಡು ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಭ್ರಷ್ಟಾಚಾರ ಮಾಡಿ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ನಮ್ಮ ಸಿಎಂ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಆದ್ರೆ ಮೋದಿ ಮಾಡಿದ ಆರೋಪಕ್ಕೆ ಒಂದೇ ಒಂದು ದಾಖಲೆ ಕೊಡಲಿ ಅಂತ ಅವರು ಸವಾಲೆಸೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಾಲೆಗ ರಜೆ ಘೋಷಿಸಿ ಗುಂಡು ತುಂಡಿನ ಪಾರ್ಟಿ ಮಾಡಿದ ಶಿಕ್ಷಕರು!