Select Your Language

Notifications

webdunia
webdunia
webdunia
webdunia

ಅಧಿಕಾರ ಬೇಡ ಎನ್ನಲು ನಾವೇನು ಸನ್ಯಾಸಿಗಳಲ್ಲ: ಕೋಟಾ ಶ್ರೀನಿವಾಸ್ ಪೂಜಾರಿ

ಅಧಿಕಾರ ಬೇಡ ಎನ್ನಲು ನಾವೇನು ಸನ್ಯಾಸಿಗಳಲ್ಲ: ಕೋಟಾ ಶ್ರೀನಿವಾಸ್ ಪೂಜಾರಿ
ಬೆಂಗಳೂರು , ಮಂಗಳವಾರ, 4 ಡಿಸೆಂಬರ್ 2018 (10:00 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಆಪರೇಷನ್ ಕಮಲ ಭೀತಿ ಎದುರಾಗಿರುವ ಬೆನ್ನಲ್ಲೇ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಹತ್ವದ ಹೇಳಿಕೆ ನೀಡಿದ್ದಾರೆ.


ನಾವು ಆಪರೇಷನ್ ಕಮಲಕ್ಕೆ ಮುಂದಾಗಿಲ್ಲ. ಆದರೆ ಕಾಂಗ್ರೆಸ್ ನ ಶಾಸಕರೇ ಬಿಜೆಪಿಗೆ ತಾವಾಗಿಯೇ ಬರಲು ಸಿದ್ಧವಾದರೆ ಪಕ್ಷಕ್ಕೆ ಸೇರಿಸಿಕೊಂಡು ಸರ್ಕಾರ ರಚಿಸುತ್ತೇವೆ. ಬಿಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಅಧಿಕಾರ ಬೇಡ ಎನ್ನಲು ನಾವೇನು ಸನ್ಯಾಸಿಗಳಲ್ಲ’ ಎಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಈ ನಡುವೆ ಶಾಸಕ ಸತೀಶ್ ಜಾರಕಿಹೊಳಿ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ನ ಆರೇಳು ಶಾಸಕರು ಬಿಜೆಪಿ ಸೇರುವುದು ಖಚಿತ. ಆದರೆ ನಾನಂತೂ ಬಿಜೆಪಿಗೆ ಹೋಗುತ್ತಿಲ್ಲ ಎಂದಿದ್ದಾರೆ. ಈ ಶಾಸಕರು ಬಿಜೆಪಿ ಸೇರುವುದರಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ವಿಷ್ಣುವರ್ಧನ್ ಸ್ಮಾರಕಕ್ಕೆ ಪೂಜೆ ಮಾಡಲು ಬಂದ ಅಭಿಮಾನಿಗಳಿಗೆ ರೈತ ಮಹಿಳೆ ಮಾಡಿದ್ದೇನು ಗೊತ್ತಾ?