Select Your Language

Notifications

webdunia
webdunia
webdunia
webdunia

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಪ್ರಾಣಿ ವಧೆ,ಮಾಂಸ ಮಾರಾಟ ಸಂಪೂರ್ಣನಿಷೇಧ

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಪ್ರಾಣಿ ವಧೆ,ಮಾಂಸ ಮಾರಾಟ ಸಂಪೂರ್ಣನಿಷೇಧ
bangalore , ಮಂಗಳವಾರ, 5 ಸೆಪ್ಟಂಬರ್ 2023 (21:07 IST)
ನಾಳೆ ರಾಜ್ಯಾದ್ಯಂತ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಹಬ್ಬದ ಸಂಭ್ರಮಾಚಾರಣೆಗೆ ತಯಾರಿ ಜೋರಾಗಿ ನಡೆಯುತ್ತಿದೆ. ನಾಳೆ ಕೃಷ್ಣ ಜನ್ಮಾಷ್ಟಮಿ ಇರುವುದರಿಂದ BBMP ತನ್ನ ವ್ಯಾಪ್ತಿಯಲ್ಲಿ ‘ಪ್ರಾಣಿ ವಧೆ ಮತ್ತು ಮಾಂಸ’ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಸುತ್ತೋಲೆ ಹೊರಡಿಸಿದೆ.ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಅಥವಾ ಶ್ರೀ ಕೃಷ್ಣ ಜನ್ಮೋತ್ಸವವನ್ನು ಆಚರಿಸಲಾಗುತ್ತದೆ. ಈ ದಿನ ಶ್ರೀ ಕೃಷ್ಣನು ರೋಹಿಣಿ ನಕ್ಷತ್ರದಲ್ಲಿ ಜನಿಸಿದನು ಎನ್ನಲಾಗುತ್ತೆ. ಈ ದಿನ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. BBMP ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡದಲ್ಲಿ NSE ಪರೀಕ್ಷೆ ಬರೆಯಲು ಪ್ರಧಾನಿಗೆ ಸಿದ್ದರಾಮಯ್ಯ ಪತ್ರ