Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಸಿಎಂ: ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ

ಕುಮಾರಸ್ವಾಮಿ ಸಿಎಂ: ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ
ರಾಮನಗರ , ಶನಿವಾರ, 19 ಮೇ 2018 (17:59 IST)
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗುವ ಹಿನ್ನೆಲೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಇನ್ನು ಚನ್ನಪಟ್ಟಣದಿಂದ ಸಿಎಂ ಆಗುತ್ತಿರುವ ಹಿನ್ನೆಲೆ ಹೆಚ್.ಡಿ.ಕೆ ಪರ ಜೆಡಿಎಸ್ ಕಾರ್ಯಕರ್ತರು ಜಯಘೋಷಗಳನ್ನ ಮೊಳಗಿಸಿದರು. 
 
ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡು ಅಬ್ಬರಿಸಿದರು. 
 
ಸಿಎಂ ಕುಮಾರಣ್ಣನಿಗೆ ಜೈ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೂ ಜೈಕಾರ ಹಾಕಿದರು. ಕಳೆದ 19 ವರ್ಷಗಳ ಬಳಿಕ ಚನ್ನಪಟ್ಟಣದಲ್ಲಿ ಆಯ್ಕೆಯಾದ ಜೆಡಿಎಸ್ ಶಾಸಕ ಹೆಚ್.ಡಿ.ಕುಮಾರಸ್ವಾಮಿ ಇದೇ ಕ್ಷೇತ್ರದಿಂದ ಸಿಎಂ ಆಗುತ್ತಿರುವುದಕ್ಕೆ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರ ಸಿಗಲಿ, ಬಿಡಲಿ ವಿರೋಧ ಪಕ್ಷದಲ್ಲಿರಲಿ, ಆಡಳಿತದಲ್ಲಿರಲಿ ಜನರಿಗಾಗಿಯೇ ಪ್ರಾಣ ಕೊಡುತ್ತೇನೆ - ಬಿಎಸ್ ಯಡಿಯೂರಪ್ಪ