Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿ ರಾವಣ, ಸಿದ್ದರಾಮಯ್ಯ ರಾಮನಂತೆ: ವೇಣುಗೋಪಾಲ್ ತಿರುಗೇಟು

ನರೇಂದ್ರ ಮೋದಿ ರಾವಣ, ಸಿದ್ದರಾಮಯ್ಯ ರಾಮನಂತೆ: ವೇಣುಗೋಪಾಲ್ ತಿರುಗೇಟು
ಚಿತ್ರದುರ್ಗ , ಮಂಗಳವಾರ, 17 ಅಕ್ಟೋಬರ್ 2017 (16:13 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ರಾವಣನಂತೆ. ಸಿಎಂ ಸಿದ್ದರಾಮಯ್ಯ ರಾಮನಂತೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿರುಗೇಟು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾವಣನಂತೆ ಎಂದು ಬಿಜೆಪಿ ನಾಯಕರು ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ವೇಣುಗೋಪಾಲ್, ಪ್ರಧಾನಿ ಮೋದಿಯೇ ರಾವಣನಂತೆ, ಸಿಎಂ ಸಿದ್ದರಾಮಯ್ಯ ರಾಮನಂತಿದ್ದಾರೆ ಎಂದರು. 
 
ಕಾಂಗ್ರೆಸ್ ಸಚಿವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಬಗ್ಗೆ ಬಿಜೆಪಿ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ. ಅವರ ಕನಸು ಯಾವತ್ತೂ ನನಸಾಗುವುದಿಲ್ಲ ಎಂದು ತಿಳಿಸಿದ್ದಾರೆ. 
 
ಮನೆ ಮನೆಗೆ ಕಾಂಗ್ರೆ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಾರೊಬ್ಬ ಸಚಿವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
 
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಆಧಾರರಹಿತವಾಗಿ ಆರೋಪ ಮಾಡುತ್ತಿದ್ದಾರೆ. ಅವರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ಮತ್ತು ಪುತ್ರರ ವಿರುದ್ಧ ಭೂ ಕಬಳಿಕೆ ದೂರು ದಾಖಲು