Select Your Language

Notifications

webdunia
webdunia
webdunia
webdunia

ಗ್ರಾಪಂ, ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ

ಗ್ರಾಪಂ, ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ
ಚಿಕ್ಕಮಗಳೂರು , ಬುಧವಾರ, 31 ಅಕ್ಟೋಬರ್ 2018 (17:05 IST)
ಗ್ರಾಮ ಪಂಚಾಯಿತಿ ಹಾಗೂ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರಿನ ಹೊರನಾಡು ಗ್ರಾಮ ಪಂಚಾಯಿತಿ, ಕಳಸ ನಾಡ ಕಚೇರಿಗೆ ಭೇಟಿ ನೀಡಿದ್ದಾರೆ. ಎರಡು ಕಚೇರಿಗಳಿಗೆ ಏಕಕಾಲದಲ್ಲಿ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮೂಡಿಗೆರೆ ತಾಲೂಕಿನ ಹೊರನಾಡು ಮತ್ತು ಕಳಸಗಳಲ್ಲಿ ಈ ಭೇಟಿ ನಡೆದಿದೆ. ನಾಡಕಚೇರಿ, ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರದ ಶಂಕೆ ವ್ಯಕ್ತವಾಗಿರುವ ಕುರಿತು ನಾಡಕಚೇರಿ, ಗ್ರಾಪಂ ವಿರುದ್ಧ ಸ್ಥಳೀಯರು ದೂರು ದಾಖಲಿಸಿದ್ದರು.

ಭೇಟಿ ವೇಳೆ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಅಷ್ಟೇ ಅಲ್ಲ, ಗ್ರಾ.ಪಂ. ಅಧ್ಯಕ್ಷೆ, ಸದಸ್ಯರು ಹಾಗೂ ಅಧಿಕಾರಿಗಳನ್ನು ವಿಚಾರಣೆ ನಡೆಸಿದರು. ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಚಿನ್ ನೇತೃತ್ವದ ತಂಡ ಭೇಟಿ ನೀಡಿತ್ತು.




Share this Story:

Follow Webdunia kannada

ಮುಂದಿನ ಸುದ್ದಿ

ರಾಜಕಾರಣದಲ್ಲಿ ಪ್ರಬುದ್ಧ ಭಾಷೆಯಿಲ್ಲ ಎಂದ ಬರಗೂರು