Select Your Language

Notifications

webdunia
webdunia
webdunia
webdunia

ಜೈ ಶ್ರೀರಾಮ್ ಎಂದ ಯುವಕನಿಗೆ ಅನ್ಯಕೋಮಿನ 20 ಯುವಕರ ಗುಂಪಿನಿಂದ ದಾಳಿ

Crime

Krishnaveni K

ಗಂಗಾವತಿ , ಬುಧವಾರ, 24 ಏಪ್ರಿಲ್ 2024 (10:00 IST)
ಗಂಗಾವತಿ: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ 20 ಯುವಕರ ಗುಂಪು ಹಲ್ಲೆ ನಡೆಸಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.

ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಮತೀಯ ಗಲಭೆಗಳು ಹೆಚ್ಚಾಗುತ್ತಿರುವುದು ಗಮನಿಸಬೇಕಾದ ಅಂಶ. ಇತ್ತೀಚೆಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಬೆಂಗಳೂರಿನಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಅನ್ಯಕೋಮಿನ ಇಬ್ಬರು ಯುವಕರು ಹಲ್ಲೆ ನಡೆಸಿದ್ದರು. ಇದಾದ ಬಳಿಕ ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಫಯಾಜ್ ಎಂಬಾತ ನೇಹಾಳನ್ನು ಹತ್ಯೆ ಮಾಡಿದ್ದ. ಇದರ ಬೆನ್ನಲ್ಲೇ ಮತ್ತೊಬ್ಬ ಅನ್ಯಕೋಮಿನ ಯುವಕ ಹಿಂದೂ ಯುವತಿಯ ಮೇಲೆ ಪ್ರೀತಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಸುದ್ದಿಯಾಗಿತ್ತು.

ಇದೀಗ ಗಂಗಾವತಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ. ಬಾರ್ ನಲ್ಲಿ ಮದ್ಯಸೇವಿಸುವಾಗ ಯುವಕ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದು, ಕೆಲವು ಕ್ಷಣದ ನಂತರ ಬಾರ್ ನಿಂದ ಹೊರಬಂದಾಗ ಅನ್ಯಕೋಮಿನ 20 ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಕುಮಾರ್ ರಾಥೋಡ್ ಎಂಬಾತ ಹಲ್ಲೆಗೀಡಾದ ಯುವಕ. ಸ್ಥಳೀಯರು ಆತನನ್ನು ರಕ್ಷಿಸಿ ಮನೆಗೆ ಕಳುಹಿಸಿದರು. ಆದರೆ ಹೊಟ್ಟೆನೋವಿನಿಂದಾಗಿ ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗ ಮಾಡಿದಳು: ಮೋದಿ ವಿರುದ್ಧ ಪ್ರಿಯಾಂಕ ವಾದ್ರಾ ಗುಡುಗು