Select Your Language

Notifications

webdunia
webdunia
webdunia
webdunia

ಯಡಿಯೂರಪ್ಪಗೆ ವಯಸ್ಸಾಯ್ತು, ಅವರಿನ್ನು ಮುಖ್ಯಮಂತ್ರಿ ಆಗಲ್ಲ ಎಂದವರು ಯಾರು ಗೊತ್ತೇ?!

ಯಡಿಯೂರಪ್ಪಗೆ ವಯಸ್ಸಾಯ್ತು, ಅವರಿನ್ನು ಮುಖ್ಯಮಂತ್ರಿ ಆಗಲ್ಲ ಎಂದವರು ಯಾರು ಗೊತ್ತೇ?!
ಬೆಂಗಳೂರು , ಬುಧವಾರ, 5 ಡಿಸೆಂಬರ್ 2018 (09:43 IST)
ಬೆಂಗಳೂರು: ಒಂದೆಡೆ ಆಪರೇಷನ್ ಕಮಲ ಮೂಲಕ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಅಧಿಕಾರ ಹಿಡಿಯಲು ಬಿಜೆಪಿ ಯತ್ನಿಸುತ್ತಿದ್ದರೆ, ಸಚಿವ ಎಂಸಿ ಮನಗೊಳಿ ಯಡಿಯೂರಪ್ಪನವರಿಗೆ ಟಾಂಗ್ ಕೊಟ್ಟಿದ್ದಾರೆ.

ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಯಡಿಯೂರಪ್ಪ ಕನಸು ನನಸಾಗಲ್ಲ. ಅವರಿಗೆ ವಯಸ್ಸಾಯ್ತು. ಇನ್ನು ಮುಖ್ಯಮಂತ್ರಿಯಾಗಲ್ಲ ಎಂದು ತೋಟಗಾರಿಕಾ ಸಚಿವ ಎಂಸಿ ಮನಗೊಳಿ ಲೇವಡಿ ಮಾಡಿದ್ದಾರೆ.

ಯಡಿಯೂರಪ್ಪ ಅಧಿಕಾರ ಹಿಡಿಯಲು ವಾಮಮಾರ್ಗ ಹಿಡಿದಿದ್ದಾರೆ. ಆದರೆ ಅವರಿಗೆ ಸಿಎಂ ಆಗುವ ವಯಸ್ಸು ಮೀರಿದೆ. ಬಿಜೆಪಿ ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ರಾತ್ರಿ ಕಂಡ ಬಾವಿಗೆ ಹಗಲು ಬಿದ್ದಂತೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಚಿವರು ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಯೋಗಿ ಬಳಿಕ ಹನುಮಾನ್ ಹೆಸರಿನಲ್ಲಿ ಮತ್ತೊಂದು ವಿವಾದ ಸೃಷ್ಟಿಸಿದ ಬಿಜೆಪಿ ಸಂಸದೆ