Select Your Language

Notifications

webdunia
webdunia
webdunia
webdunia

ಸಚಿವ ಸತೀಶ್ ಜಾರಕಿಹೊಳಿಗೆ ಕೈ ಮುಖಂಡರ ಬುಲಾವ್

ಸಚಿವ ಸತೀಶ್ ಜಾರಕಿಹೊಳಿಗೆ ಕೈ ಮುಖಂಡರ ಬುಲಾವ್
ಬೆಳಗಾವಿ , ಮಂಗಳವಾರ, 15 ಜನವರಿ 2019 (17:04 IST)
ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿಗೆ ಬೆಂಗಳೂರಿಗೆ ಬುಲಾವ್ ಬಂದಿದೆ.

ಕೂಡಲೇ ಬೆಂಗಳೂರಿಗೆ ಬರುವಂತೆ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಾ.ಜಿ. ಪರಮೇಶ್ವರ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅತೃಪ್ತ ಶಾಸಕರ ನೇತೃತ್ವವನ್ನ ರಮೇಶ ಜಾರಕಿಹೊಳಿ ವಹಿಸಿರುವ ಹಿನ್ನೆಲೆಯಲ್ಲಿ ಸಹೋದರ ಸತೀಶ್ ಜಾರಕಿಹೊಳಿಗೆ ಬುಲಾವ್ ಕಳಿಸಲಾಗಿದೆ.

ಹೇಗಾದರೂ ಮಾಡಿ ರಮೇಶ ಜಾರಕಿಹೊಳಿ ಮನವೊಲಿಸುವಂತೆ ಸತೀಶ್ ಜಾರಕಿಹೊಳಿಗೆ ಸೂಚನೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಕಾಂಗ್ರೆಸ್ ನಾಯಕರು ಹಾಗೂ ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧ ಮುನಿಸಿಕೊಂಡು ಸಂಪರ್ಕಕ್ಕೆ ಸಿಗದೇ ಇರುವ ರಮೇಶ ಜಾರಕಿಹೊಳಿ ನಡೆ ನಿಗೂಢವಾಗಿದೆ.

ಮಾಜಿ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಮುಂಬೈನ ಖಾಸಗಿ ರೆಸಾರ್ಟ್ ನಲ್ಲಿರುವ 10 ಕ್ಕೂ ಹೆಚ್ಚು ಶಾಸಕರು ಇದ್ದಾರೆ ಎನ್ನಲಾಗಿದ್ದು, ಈ ಸುದ್ದಿಯಿಂದಾಗಿ ತೀವ್ರ ಒತ್ತಡಕ್ಕೆ ಕಾಂಗ್ರೆಸ್ ನಾಯಕರು ಒಳಗಾಗುವಂತಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಅತೀದೊಡ್ಡ ಕೆರೆ ಹೊಂದಿರುವ ಗುಡ್ಡದಲ್ಲಿ ಕಾಡ್ಗಿಚ್ಚು…!