Select Your Language

Notifications

webdunia
webdunia
webdunia
webdunia

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ; ಜೈಲು ಪಾಲಾಗ್ತಾರಾ ಕಂಪ್ಲಿ ಶಾಸಕ ಗಣೇಶ್

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ; ಜೈಲು ಪಾಲಾಗ್ತಾರಾ ಕಂಪ್ಲಿ ಶಾಸಕ ಗಣೇಶ್
ಬೆಂಗಳೂರು , ಗುರುವಾರ, 21 ಫೆಬ್ರವರಿ 2019 (12:02 IST)
ಬೆಂಗಳೂರು : ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಗಣೇಶ್ ಅವರನ್ನು ಬಿಡದಿ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.


ಶಾಸಕ ಆನಂದ್ ಸಿಂಗ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಕಂಪ್ಲಿ ಶಾಸಕ ಗಣೇಶ್ ಮೇಲೆ ಐಪಿಸಿ ಸೆಕ್ಷನ್ 307 ರ ಅಡಿ ಕೇಸ್ ದಾಖಲಾಗಿತ್ತು. ಅವರ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಾಗಿದ್ದ ಹಿನ್ನಲೆಯಲ್ಲಿ, ಅವರಿಗೆ ಜಾಮೀನು ಸಿಗುವ ಸಾಧ್ಯತೆ ಕಡಿಮೆ ಇದೆ ಎಂದು ಅವರ ಪರ ವಕೀಲರು ಹೇಳಿದ್ದಾರೆ. ಹೀಗಾಗಿ ಅವರನ್ನು ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ಅಲ್ಲದೇ ಹಲ್ಲೆ ನಡೆಸಿದ ಬಳಿಕ ಗಣೇಶ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೂ, ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಬಳಿಕ ಜಾಮೀನು ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದರು. ಸದ್ಯ ಪೊಲೀಸ್ ವಶದಲ್ಲಿರುವ ಗಣೇಶ್ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿ- ಸಿದ್ದರಾಮಯ್ಯ