Select Your Language

Notifications

webdunia
webdunia
webdunia
webdunia

ಮತದಾರರ ನಿರೀಕ್ಷೆ ಪೂರೈಸುವ ಶಕ್ತಿ ನೀಡಲು ಭಗವಂತನಲ್ಲಿ ಪ್ರಾರ್ಥಿಸಿದ ಶಾಸಕ

ಮತದಾರರ ನಿರೀಕ್ಷೆ ಪೂರೈಸುವ ಶಕ್ತಿ ನೀಡಲು ಭಗವಂತನಲ್ಲಿ ಪ್ರಾರ್ಥಿಸಿದ ಶಾಸಕ
ಕಲಬುರಗಿ , ಭಾನುವಾರ, 22 ಜುಲೈ 2018 (20:38 IST)
ಮತದಾರರ ನಿರೀಕ್ಷೆ ಪೂರೈಸುವ ಶಕ್ತಿಯನ್ನು ನನಗೆ ದೇವರು ನೀಡಬೇಕು. ಹೀಗಂತ ದೇವರಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಮೊರೆಯಿಟ್ಟಿದ್ದಾರೆ.

ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಬಂಜಾರಾ ಸಮಾಜದಿಂದ ಏಕೈಕ ಶಾಸಕನಾಗಿ ನಾನು ಆಯ್ಕೆಯಾಗಿದ್ದು, ಬಂಜಾರ ಸಮಾಜ ಹಾಗೂ ಹಿಂದುಳಿದ ಸಮಾಜ ನನ್ನ ಮೇಲೆ ಅಗಾಧವಾದ ನಿರೀಕ್ಷೆಗಳನ್ನು ಇಟ್ಟುಕೊಂಡಿವೆ. ಅವರ ನಿರೀಕ್ಷೆಗಳನ್ನು ಪೂರೈಸುವಂತೆ ಶಕ್ತಿ ನೀಡಲೆಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಚಿಂಚೋಳಿ ಶಾಸಕ ಡಾ. ಉಮೇಶ ಜಿ. ಜಾಧವ ಹೇಳಿದ್ದಾರೆ.
ಕಲಬುರಗಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ಬಂಜಾರ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಸಂಘ ಮತ್ತು ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ಜಿಲ್ಲೆಯಲ್ಲಿರುವ ಬಂಜಾರ ಸಮಾಜ ಹಾಗೂ ಹಿಂದುಳಿದ ಸಮಾಜದವರು ಪಕ್ಷ ಬೇಧ ಮರೆತು  ನನಗೆ ಸನ್ಮಾನ ಮಾಡಿರುವುದು ನನಗೆ ದೊಡ್ಡ ಜವಾಬ್ದಾರಿ ತಂದುಕೊಟ್ಟಿದೆ.

ಸಾರ್ವಜನಿಕರಿಗಾಗಿ ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಯಾವುದೇ ತೊಂದರೆ ಇದ್ದಲ್ಲಿ ತಕ್ಷಣ ಗಮನಕ್ಕೆ ತರಬೇಕು. ಅದನ್ನು ಪರಿಹರಿಸುವ ಪ್ರಯತ್ನ ಮಾಡಲಾಗುವುದು ಎಂದರು. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಬಂಜಾರಾ ಸಮಾಜವು ಮುಂದುವರೆಯಬೇಕಾದರೆ ಡಾ.  ಬಾಬಾಸಾಹೇಬ್ ಅಂಬೇಡ್ಕರರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ ಸಂಭಂದಕ್ಕೆ ಮಗನನ್ನು ಬಲಿ ಕೊಟ್ಟ ಪಾಪಿ ತಾಯಿ