Select Your Language

Notifications

webdunia
webdunia
webdunia
webdunia

ಮೈತ್ರಿ ಸರಕಾರಕ್ಕೆ ಶಾಕ್: ಕೈ ಕೊಟ್ಟ ಶಾಸಕರು!

ಮೈತ್ರಿ ಸರಕಾರಕ್ಕೆ ಶಾಕ್: ಕೈ ಕೊಟ್ಟ ಶಾಸಕರು!
ಬೆಂಗಳೂರು , ಬುಧವಾರ, 6 ಫೆಬ್ರವರಿ 2019 (21:23 IST)
ಮೈತ್ರಿ ಸರಕಾರಕ್ಕೆ ಶಾಕ್ ಬಿದ್ದಂತಾಗಿದೆ. ಶಾಸಕರಿಗೆ ವಿಪ್ ಜಾರಿ ಮಾಡಿದ್ದರೂ ಅದನ್ನು ಲೆಕ್ಕಿಸದೇ 9 ಶಾಸಕರು ಸದನಕ್ಕೆ ಗೈರಾಗಿದ್ದಾರೆ. ಇದರಿಂದಾಗಿ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಿದೆಯಾ? ಎನ್ನುವ ಚರ್ಚೆ ಶುರುವಾಗಿದೆ.

ಸದನಕ್ಕೆ ಗೈರು ಹಾಜರಾಗಿರುವ ಶಾಸಕರು ಕಾಂಗ್ರೆಸ್  ಮುಖಂಡರಿಗೆ ಸೆಡ್ಡು ಹೊಡೆದಿದ್ದಾರೆ.  ಇದರಿಂದಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ಬಿಸಿತುಪ್ಪದಂತಾಗಿದೆ.

ಕಾಂಗ್ರೆಸ್ ಅತೃಪ್ತ ಶಾಸಕರ ಗೈರು ಹಾಜರಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಳ್ಳುವ ಭೀತಿಗೆ ಸಿಲುಕಿಸಿದೆ. ದೋಸ್ತಿ ಪಕ್ಷಗಳ ನಾಯಕರ ನಿದ್ದೆಗೆಡಿಸಿದೆ. ಸದ್ದಿಲ್ಲದೆ ಬಿಜೆಪಿ ನಾಯಕರು `ಆಪರೇಷನ್ ಲೋಟಸ್ ರಾಕೆಟ್`ಯಡಿ ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆಯುವಲ್ಲಿ ಹಾಗೂ ಸದನಕ್ಕೆ ಗೈರು ಹಾಜರು ಮಾಡಿಸುವಲ್ಲಿ ಬಹುತೇಕ ಯಶಸ್ಸು ಸಾಧಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ: ಕಾರಣ ಏನು?