Select Your Language

Notifications

webdunia
webdunia
webdunia
webdunia

ಜಗತ್ತಿನ ಯಾವುದೇ ಸಂಸ್ಥೆಯಿಂದ ತನಿಖೆ ನಡೆಸಲಿ ಎಂದ ಶಾಸಕ

ಜಗತ್ತಿನ ಯಾವುದೇ ಸಂಸ್ಥೆಯಿಂದ ತನಿಖೆ ನಡೆಸಲಿ ಎಂದ ಶಾಸಕ
ಕಲಬುರ್ಗಿ , ಗುರುವಾರ, 14 ಮಾರ್ಚ್ 2019 (14:36 IST)
ನಾನು ದುಡ್ಡು ಪಡೆದುಕೊಂಡಿದ್ದು ನಿಜವೇ ಆಗಿದ್ದಲ್ಲಿ ಜಗತ್ತಿನ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ ಎಂದು ಕೈ ಪಾಳೆಯಕ್ಕೆ ರಾಜೀನಾಮೆ ನೀಡಿರುವ ಶಾಸಕ ಸವಾಲು ಹಾಕಿದ್ದಾರೆ.

ಸ್ಪೀಕರ್  ರಮೇಶ್ ಕುಮಾರ್ ಯಾರ ಒತ್ತಡಕ್ಕೂ ಮಣಿಯಲ್ಲ. ನ್ಯಾಯಬದ್ಧವಾಗಿ ಕೆಲಸ ನಿರ್ವಹಿಸಲಿದ್ದಾರೆ.  ರಾಜೀನಾಮೆ ಡಿಲೇ ಯಾಕೆ ಆಗ್ತಾ ಇದೆಯೋ ಗೊತ್ತಿಲ್ಲ. ಶೀಘ್ರವೇ ರಾಜೀನಾಮೆ ಅಂಗೀಕಾರವಾಗಲಿದೆ ಅನ್ನೋ ವಿಶ್ವಾಸವಿದೆ. ಹೀಗಂತ ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಶಾಸಕ ಉಮೇಶ್ ಜಾಧವ ಹೇಳಿದ್ದಾರೆ.

ರಾಜೀನಾಮೆ ಅಂಗೀಕಾರವಾಗದಿದ್ದರೂ ಲೋಕಸಭೆ ಚುನಾವಣೆಗೆ ನಿಲ್ತೇನೆ. ಸಂವಿಧಾನ ನೀಡಿರೋ ಹಕ್ಕು, ಹೀಗಾಗಿ ನಾನು ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದು ಉಮೇಶ್ ಜಾಧವ್ ಹೇಳಿದ್ದಾರೆ.
ಉಮೇಶ್ ಜಾಧವ್ ಚಿಂಚೋಳಿ ಶಾಸಕರಾಗಿದ್ದಾರೆ. ನಾನು ದುಡ್ಡು ತೆಗೆದುಕೊಂಡಿದ್ದೇನೆ ಎನ್ನೋದಾದ್ರೆ ಜಗತ್ತಿನ ಯಾವುದೇ ಸಂಸ್ಥೆಯಿಂದ ತನಿಖೆ ನಡೆಸಲಿ. ಅವರ ಮನೆಯವರ ಮೇಲೆ ಆಣೆ ಮಾಡಲಿ, ನಾನು ಮಾಡುತ್ತೇನೆ.  

ಸುಳ್ಳು ಆರೋಪ ಮಾಡಿ, ತೇಜೋವಧೆ ಮಾಡೋದು ಸರಿಯಲ್ಲ. ತನ್ನನ್ನು ದತ್ತುಪುತ್ರನನ್ನಾಗಿ ಸ್ವೀಕರಿಸುವಂತೆ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಜಾಧವ್, ಪ್ರಿಯಾಂಕ್ ಖರ್ಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚಿಂಚೋಳಿಯಲ್ಲಿ ಸ್ಪರ್ಧಿಸಲಿ. ಅಲ್ಲಿ ಗೆದ್ದು ದತ್ತುಪುತ್ರನಾಗಲಿ ಎಂದು ವ್ಯಂಗ್ಯವಾಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಶಾಲಾ ಮಕ್ಕಳಿದ್ದ ಬಸ್ ಹಳ್ಳಕ್ಕೆ ಬಿತ್ತು; ಮುಂದೇನಾಯ್ತು?