Select Your Language

Notifications

webdunia
webdunia
webdunia
webdunia

ಜೂನ್‌ನಲ್ಲಿ ಬೆಂಗಳೂರಿನ 110 ಹಳ್ಳಿಗೆ ನೀರು ಪೂರೈಕೆ: ಸಿಎಂ ಸಿದ್ದರಾಮಯ್ಯ

CM Siddaramaiah

Sampriya

ಬೆಂಗಳೂರು , ಸೋಮವಾರ, 18 ಮಾರ್ಚ್ 2024 (19:55 IST)
ಬೆಂಗಳೂರು:  ನಗರದಲ್ಲಿ ಉದ್ಭವಿಸಿರುವ ನೀರಿನ ಬಿಕ್ಕಟ್ಟಿನ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
 
ಕಬಿನಿ ಮತ್ತು ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯಗಳಲ್ಲಿ ಸಾಕಷ್ಟು ನೀರಿದ್ದು, ಜೂನ್‌ನಲ್ಲಿ ಬೆಂಗಳೂರು ಸುತ್ತಮುತ್ತಲಿನ 110 ಹಳ್ಳಿಗಳಿಗೆ ಸರ್ಕಾರ ನೀರು ಹರಿಸಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
 
ಇಂದು ನಾನು ಬಿಡಬ್ಯುಎಸ್‌ಎಸ್‌ಬಿ, ಬಿಬಿಎಂಪಿ ಮತ್ತು ಇಂಧನ ಇಲಾಖೆಯೊಂದಿಗೆ ಸಭೆ ನಡೆಸಿದ್ದೇನೆ. ಬೆಂಗಳೂರಿನಲ್ಲಿ 14,000 ಬೋರ್‌ವೆಲ್‌ಗಳಲ್ಲಿ 6,900 ಬತ್ತಿವೆ. ಬಹುತೇಕ  ಕೆರೆಗಳು ಬತ್ತಿ ಹೋಗಿವೆ. ಬೆಂಗಳೂರಿಗೆ ಪ್ರತಿದಿನ 2,600  (ಮೆಗಾಲಿಟರ್ಸ್ ಪರ್ ದಿನ) ನೀರು ಬೇಕಾಗುತ್ತದೆ...ಜೂನ್‌ನಲ್ಲಿ ಬೆಂಗಳೂರಿನ ಸುತ್ತಮುತ್ತಲಿನ ಎಲ್ಲಾ 110 ಹಳ್ಳಿಗಳಿಗೆ ನೀರು ಕೊಡುತ್ತೇವೆ. ಕಬಿನಿ ಮತ್ತು ಕೆಆರ್‌ಎಸ್‌ ಡ್ಯಾಂಗಳಲ್ಲಿ ಸಾಕಷ್ಟು ನೀರಿದೆ, ಎಂದು ಸಿದ್ದರಾಮಯ್ಯ ಹೇಳಿದರು.
 
"ನಾವು ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಮುಂಗಾರು ನಿರೀಕ್ಷಿಸುತ್ತಿದ್ದೇವೆ" ಎಂದು ಅವರು ಹೇಳಿದರು.
 
ಬೆಂಗಳೂರಿನಲ್ಲಿ ಶೇ 50ರಷ್ಟು ಬೋರ್‌ವೆಲ್‌ಗಳು ಬತ್ತಿ ಹೋಗಿವೆ. ಮಾರ್ಚ್ 11 ರಂದು, ಬೆಂಗಳೂರು ನಾಗರಿಕ ಅಧಿಕಾರಿಗಳು ನಗರದಲ್ಲಿ ಅಂತರ್ಜಲ ಮೂಲಗಳನ್ನು ಮರುಪೂರಣಗೊಳಿಸಲು ಒಣಗುತ್ತಿರುವ ಕೆರೆಗಳಿಗೆ ದಿನಕ್ಕೆ 1,300 ಮಿಲಿಯನ್ ಲೀಟರ್ ಶುದ್ಧೀಕರಿಸಿದ ನೀರಿನಿಂದ ತುಂಬಿಸಲಾಗುವುದು ಎಂದು ಹೇಳಿದ್ದರು.
 
''ನಗರದಲ್ಲಿ ಶೇ 50ರಷ್ಟು ಬೋರ್‌ವೆಲ್‌ಗಳು ಬತ್ತಿ ಹೋಗಿವೆ. ನಗರದ ಹೊರಗಿನ ಮೂಲಗಳಿಂದ ನೀರು ಸರಬರಾಜು ಮಾಡಲು ಸಾವಿರಾರು ಖಾಸಗಿ ನೀರಿನ ಟ್ಯಾಂಕರ್‌ಗಳನ್ನು (ನೋಂದಣಿ ಮಾಡುವ ಮೂಲಕ) ನಿಯಂತ್ರಣಕ್ಕೆ ತೆಗೆದುಕೊಳ್ಳಲು ನಾವು ನಿರ್ಧರಿಸಿದ್ದೇವೆ. ಪ್ರಯಾಣದ ದೂರದಂತಹ ಅಂಶಗಳು ವೆಚ್ಚವನ್ನು ನಿರ್ಧರಿಸುವುದರಿಂದ ನಾವು ಬೆಲೆಯನ್ನು ಅಧಿಕಾರಿಗಳಿಗೆ ಬಿಟ್ಟಿದ್ದೇವೆ. ಬಳಕೆಯಾಗದ ಹಾಲಿನ ಟ್ಯಾಂಕರ್‌ಗಳನ್ನು ನೀರು ಸಾಗಿಸಲು ಬಳಸಲಾಗುವುದು ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿನಲ್ಲಿ ಇಂದು ಗಾಳಿ ಮಳೆ: ಬೆಂಗಳೂರಿನಲ್ಲಿ ಮಾರ್ಚ್‌ ಅಂತ್ಯಕ್ಕೆ ಮಳೆ ಸಾಧ್ಯತೆ