Select Your Language

Notifications

webdunia
webdunia
webdunia
webdunia

ಎಂಪಿ ಚುನಾವಣೆ: ಕೈ ಪಾಳೆಯ ಸನ್ನದ್ಧ

ಎಂಪಿ ಚುನಾವಣೆ: ಕೈ ಪಾಳೆಯ ಸನ್ನದ್ಧ
ಬೆಂಗಳೂರು , ಸೋಮವಾರ, 1 ಅಕ್ಟೋಬರ್ 2018 (19:33 IST)
ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಸದ್ಯಕ್ಕೆ ತಣ್ಣಗಾದಂತೆ ಕಂಡು ಬಂದಿರುವ ಸನ್ನಿವೇಶದಲ್ಲಿ ಕಾಂಗ್ರೆಸ್ ಚಿಂತನ ಮಂಥನ ಹಮ್ಮಿಕೊಳ್ಳಲಾಗಿದೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. ಗೆಲುವಿನ ಹಾದಿಯಲ್ಲಿ ಪಕ್ಷವನ್ನು ಕೊಂಡೊಯ್ಯಲು ಪಕ್ಷದ ಮುಖಂಡರು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ನಾಗಪುರದಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯಕಾರಿಯಲ್ಲಿ ಚಿಂತನಾ ಮಂಥನ ಆಯೋಜಿಸಲಾಗಿದೆ.

ಅ.2ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಈ ಕಾರ್ಯಕಾರಿಣಿ ನಡೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಬಗ್ಗೆ ಚರ್ಚೆ ನಡೆಯಲಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಎಬಿಸಿ ವಲಯ ವಿಂಗಡಣೆ: ಶಿಕ್ಷಕರ ವರ್ಗಾವಣೆ ಶೀಘ್ರ ಎಂದ ಸಚಿವ