Select Your Language

Notifications

webdunia
webdunia
webdunia
webdunia

ಕೊಲೆಗಡುಕನ ಮನೆಗೆ ಬುಲ್ಡೋಜರ್‌ನಲ್ಲಿ ಕೆಡವಬೇಕು: ಪ್ರಮೋದ್ ಮುತಾಲಿಕ್

Pramodh Mutalik

Sampriya

ಹುಬ್ಬಳ್ಳಿ , ಶುಕ್ರವಾರ, 19 ಏಪ್ರಿಲ್ 2024 (16:07 IST)
Photo Courtesy X
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳಕಳಿ ಇದ್ದಲ್ಲಿ, ಕೊಲೆಗಡುಕನನ್ನು ಎನ್‌ಕೌಂಟರ್ ಮಾಡಿಸಲಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ಲಾಂನಲ್ಲಿ ಕೊಲೆ ಮಾಡುವುದು ಸಹಜವಾಗಿದ್ದು, ಇಂದು ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ.  ಕೊಲೆಯಾದ ಬಾಲಕಿ ಮೇಲೆ  ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಎಲ್ಲಿಯೋ ತರಬೇತಿ ಪಡೆದಿದ್ದಾನೆ. ಕಾಂಗ್ರೆಸ್ ಬೆಳೆಸಿದ ವಿಷ ಬೀಜವಿದು ಎಂದು ಆರೋಪಿಸಿದರು.

ಈ ಹಿಂದೆ ಕಾಂಗ್ರೆಸ್ ಬ್ರಿಟಿಷರ ಪರವಿದ್ದರು. ಇದೀಗ ಮುಸ್ಲಿಂ ಕೊಲೆಗಡುಗರ ಪರವಿದೆ. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹತ್ತಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೆ ಫತ್ವಾ ಹೊರಡಿಸಿ ಮನೆ ಬಹಿಷ್ಕರಿಸಬೇಕು ಎಂದರು.

ವಕೀಲರು ಅವನ ಪರ ನಿಲ್ಲಬಾರದು. ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ ಮಾಡಿದ್ದಾನೆ. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತದೋ ಅಲ್ಲಿಯವರೆಗೆ ಈ ರೀತಿ ಕೊಲೆಗಳಾಗುತ್ತವೆ. ರಾಜ್ಯದಲ್ಲೂ ಯುಪಿ ಮಾದರಿ ಬುಲ್ಡೋಜರ್ ಸಂಸ್ಕೃತಿ ಜಾರಿಯಾದಾಗ ಮಾತ್ರ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ದೊರೆಯಲು ಸಾಧ್ಯ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರ ವಿರುದ್ಧ ಆಕ್ಷೇಪಾರ್ಯ ಹೇಳಿಕೆ: ಎಚ್‌ಡಿ ಕುಮಾರಸ್ವಾಮಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್