Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಹೊಸ ಭಾಗ್ಯ!

ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಹೊಸ ಭಾಗ್ಯ!
ಬಳ್ಳಾರಿ , ಬುಧವಾರ, 31 ಜನವರಿ 2018 (11:53 IST)
ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ರಾಜ್ಯದ ಜನರಿಗೆ ಅನೇಕ ವಿಧವಾದ ಭಾಗ್ಯಗಳನ್ನು ನೀಡಿದ್ದು, ಈಗ ಮತ್ತೊಂದು ಹೊಸ  ಭಾಗ್ಯವನ್ನು ನೀಡುವುದಾಗಿ ತಿಳಿದು ಬಂದಿದೆ.


ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದು, ಆ ಸಂದರ್ಭದಲ್ಲಿ ಇನ್ನು ಮುಂದೆ ಬಿಪಿ.ಎಲ್ ಕಾರ್ಡ್ ಹೊಂದಿದ ರಾಜ್ಯದ ಪ್ರತಿ ಕುಟುಂಬಗಳಿಗೆ ಸಿದ್ದರಾಮಯ್ಯ ಸರ್ಕಾರ ಕಂಬಳಿ ಭಾಗ್ಯ ನೀಡುವ ವಿಷಯವನ್ನು ತಿಳಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಕಂಬಳಿ ತಯಾರಿಕೆಯ ಮೇಲೆ ಅವಲಂಬನೆಯಾಗಿರುವ ಕುಟುಂಬಗಳು ಸಂಕಷ್ಟದಲ್ಲಿದ್ದು, ಈ ಯೋಜನೆ ಜಾರಿಯಿಂದ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಅಲ್ಲದೆ ಕಂಬಳಿ ಬಳಕೆ ಮಾಡುವುದರಿಂದ ಮನುಷ್ಯ ಚಳಿ, ಮಳೆ, ಗಾಳಿಯಿಂದ ರಕ್ಷಣೆ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ನೌಕರರ ವೇತನ ಶೇ.30ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು