Select Your Language

Notifications

webdunia
webdunia
webdunia
webdunia

ಅಪರೇಷನ್ ಕಮಲದ ವಿಚಾರ; ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್

ಅಪರೇಷನ್ ಕಮಲದ  ವಿಚಾರ; ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್
ಬೆಂಗಳೂರು , ಮಂಗಳವಾರ, 4 ಡಿಸೆಂಬರ್ 2018 (11:57 IST)
ಬೆಂಗಳೂರು : ಶ್ರೀರಾಮುಲು ಪಿಎ ಅಪರೇಷನ್ ಕಮಲದ  ಆಡಿಯೋ ಬಹಿರಂಗ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.


ಬಿಜೆಪಿ ನಾವು ಅಪರೇಷನ್ ಕಮಲ ಮಾಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಡಿ.ಕೆ.ಶಿವಕುಮಾರ್ ಯಾರು ಏನು ಮಾಡ್ತಿದ್ದಾರೆ. ಎಲ್ಲಿಗೆ ಹೋಗ್ತಿದ್ದಾರೆ ಅನ್ನೋದು ಗೊತ್ತಿದೆ. ಮೂರು ದಿನದಿಂದ ಎಲ್ಲೆಲ್ಲಿ ಏನೇನು ಆಗ್ತಿದೆ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ.


ಹಾಗೇ ಅಶ್ವತ್ಥ್ ನಾರಾಯಣ ಸೇರಿ ಹಲವರನ್ನು ತನಿಖೆ ಮಾಡಿದ್ರೆ ಎಲ್ಲವೂ ಗೊತ್ತಾಗುತ್ತೆ. ನಾವೇನು ಸುಮ್ಮನೆ ಕುಳಿತಿಲ್ಲ. ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದ್ರೆ ಗೊತ್ತಾಗುತ್ತೆ. ರಾಮುಲಣ್ಣಗೆ ಎಲ್ಲವೂ ಗೊತ್ತು ಎಂದು ಅವರು ಮತ್ತೆ ಟಾಂಗ್ ನೀಡಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಗಿಂತ ಮೊದಲು ಸೆಲ್ಫೀ ತೆಗೆದ ತಪ್ಪಿಗೆ ಭಾವೀ ಅಳಿಯ-ಮಗಳನ್ನೇ ಕೊಲೆ ಮಾಡಿದ ತಂದೆ!