Select Your Language

Notifications

webdunia
webdunia
webdunia
webdunia

ಹೆಗಡೆ ಆಗಮನಕ್ಕೆ ವಿರೋಧ; ಪ್ರತಿಭಟನಾಕಾರರ ಬಂಧನ

ಹೆಗಡೆ ಆಗಮನಕ್ಕೆ ವಿರೋಧ; ಪ್ರತಿಭಟನಾಕಾರರ ಬಂಧನ
ದಾವಣಗೆರೆ , ಭಾನುವಾರ, 22 ಜುಲೈ 2018 (21:08 IST)
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ದಲಿತ ಸಂಘಟನೆ ಗಳಿಂದ ಪ್ರತಿಭಟನೆ ನಡೆದಿದೆ. ದಾವಣಗೆರೆಗೆ ನಮೋ ಭಾರತ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದ ಹೆಗಡೆ ವಿರುದ್ಧ ದಲಿತ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸಿದ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಚಿವ ಹೆಗಡೆ ವಿರುದ್ಧ ಘೋಷಣೆ ಹಾಕಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ದಾವಣಗೆರೆ ನಗರದ ಜಿಲ್ಲಾ ಪಂಚಾಯಿತ್ ಕಚೇರಿ ಬಳಿ ಇರುವ ಸರ್ಕೀಟ್ ಹೌಸ್ ಬಳಿ ಘಟನೆ ನಡೆದಿದೆ.

ಕೇಂದ್ರ ಸಚಿವ ಹೆಗಡೆ ಬರುವ ಮೊದಲೇ ಪ್ರತಿಭಟನೆ ಗೆ ಮುಂದಾಗಿದ್ದ ದಲಿತ ಸಂಘಟನೆಗಳ ಪ್ರಮುಖರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. 20ಕ್ಕೂ ಹೆಚ್ಚು ಜನ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆಗೊಳಿಸಿದರು.



 

 


Share this Story:

Follow Webdunia kannada

ಮುಂದಿನ ಸುದ್ದಿ

ಮಹಿಷ ಮರ್ದಿನಿ ದೇಗುಲದ ಗೇಟ್ ವಿವಾದ ಸುಖಾಂತ್ಯ