Select Your Language

Notifications

webdunia
webdunia
webdunia
webdunia

ಮಾಧ್ಯಮಗಳ‌‌ ಬಗ್ಗೆ ಅವಹೇಳನಕಾರಿ ಮಾತು: ಶಾಸಕ ಬಿ.ನಾರಾಯಣರಾವ್ ವಿರುದ್ಧ ಆಕ್ರೋಶ

ಮಾಧ್ಯಮಗಳ‌‌ ಬಗ್ಗೆ ಅವಹೇಳನಕಾರಿ ಮಾತು: ಶಾಸಕ ಬಿ.ನಾರಾಯಣರಾವ್ ವಿರುದ್ಧ ಆಕ್ರೋಶ
ಬೀದರ್ , ಶನಿವಾರ, 29 ಸೆಪ್ಟಂಬರ್ 2018 (16:32 IST)
ಬೀದರ್ ಜಿಲ್ಲೆಯ ಬಸವಕಲ್ಯಾಣ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೀದರ್ ನಗರದ ಬಸವೇಶ್ವರ ವೃತ್ತದಿಂದ  ಡಿಸಿ ಕಚೇರಿವರೆಗೆ ರ್ಯಾಲಿ ನಡೆಯಿತು.

ರ್ಯಾಲಿ ಮುಖಾಂತರ ಪ್ರತಿಭಟನೆ ನಡೆಸಿದ ಬೀದರ್  ಪತ್ರಕರ್ತ ಸಂಘಟನೆಗಳ ಒಕ್ಕೂಟದ ಸದಸ್ಯರು, ಅವಹೇಳನಕಾರಿ ಮಾತನಾಡಿದ ಶಾಸಕರ ಕ್ರಮ ಖಂಡಿಸಿದರು.

ಶಾಸಕ ಬಿ.ನಾರಾಯಣರಾವ್ ವಿರುದ್ಧ ನ್ಯಾಯಾಲಯಕ್ಕೆ ಪತ್ರಕರ್ತರ ಸಂಘದಿಂದ ದೂರು ಸಲ್ಲಿಸಲು ನಿರ್ಧಾರ ಮಾಡಲಾಯಿತು.
ಒಂದು ವಾರದೊಳಗೆ ಶಾಸಕ ಬಿ.ನಾರಾಯಣರಾವ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಯಿತು.

ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ. ಬೀದರ್ ಜಿಲ್ಲಾಧಿಕಾರಿ ಮುಖಾಂತರ  ಸ್ಪೀಕರ್ ರಮೇಶ ಕುಮಾರ್  ಮನವಿ ಸಲ್ಲಿಕೆ ಮಾಡಲಾಯಿತು.

ಬೀದರ್‌ನಲ್ಲಿ ಇತ್ತೀಚೆಗೆ ನಡೆದ ಐಕ್ಯತೆ ಸಮಾವೇಶದಲ್ಲಿ   ಮಾಧ್ಯಮಗಳ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಶಾಸಕ ನಾರಾಯಣರಾವ್ ನೀಡಿದ್ದರು.




Share this Story:

Follow Webdunia kannada

ಮುಂದಿನ ಸುದ್ದಿ

ಶೈಕ್ಷಣಿಕ ಸಮಸ್ಯೆ ಪರಿಹರಿಸಿ ಎಂದ ವಿದ್ಯಾರ್ಥಿಗಳು