Select Your Language

Notifications

webdunia
webdunia
webdunia
webdunia

ನಾಯಿ ಅಟ್ಟಿಸಿಕೊಂಡು ಬಂತೆಂದು ಸ್ಪೀಡಾಗಿ ಬೈಕ್ ಓಡಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಯುವಕ

ನಾಯಿ ಅಟ್ಟಿಸಿಕೊಂಡು ಬಂತೆಂದು ಸ್ಪೀಡಾಗಿ ಬೈಕ್ ಓಡಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಯುವಕ
ಬೆಂಗಳೂರು , ಶುಕ್ರವಾರ, 26 ಅಕ್ಟೋಬರ್ 2018 (09:39 IST)
ಬೆಂಗಳೂರು: ಮಧ್ಯರಾತ್ರಿ ಮನೆಗೆ ಹೋಗುವಾಗ ಬೆಂಗಳೂರಿನ ಬೀದಿಗಳಲ್ಲಿ ಬೀದಿ ನಾಯಿಗಳು ಯಾವಾಗ ದಾಳಿ ಮಾಡುತ್ತದೋ ಎಂಬ ಭಯ ಎಲ್ಲರಿಗೂ ಇದ್ದೇ ಇರುತ್ತದೆ.

ಆದರೆ ಕೆಆರ್ ಪುರದಲ್ಲಿ ಯುವಕನೊಬ್ಬ ಬೈಕ್ ನಲ್ಲಿ ಮಧ್ಯರಾತ್ರಿ ಮನೆಗೆ ತೆರಳುವಾಗ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬರುತ್ತಿದ್ದವು ಎಂದು ಸ್ಪೀಡಾಗಿ ಹೋಗಿ ಪೊಲೀಸರ ಕೈಲಿ ಸಿಕ್ಕಿಬಿದ್ದಿದ್ದಾನೆ.

ಬೈಕ್ ಸ್ಪೀಡಾಗಿ ಓಡಿಸಿದ್ದಕ್ಕೆ ಪೊಲೀಸರ ಲಾಠಿ ಏಟು ತಿನ್ನಬೇಕಾಯಿತು ಎಂದು ರೋಹನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅಲವತ್ತುಗೈದಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ನಗರ ಪೊಲೀಸ್ ಆಯುಕ್ತರ ಫೇಸ್ ಬುಕ್ ಪೇಜ್ ಗೆ ಹಂಚಿಕೊಂಡಿದ್ದು, ಅಮಾಯಕರ ಮೇಲೆ ಪೊಲೀಸರ ದೌರ್ಜನ್ಯ ತಡೆಯುವಂತೆ ಮನವಿ ಮಾಡಿದ್ದಾನೆ.

ಆದರೆ ಪೊಲೀಸರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆನಂದಪುರ ವೃತ್ತದಲ್ಲಿ ಇಬ್ಬರು ಯುವಕರು ವೇಗವಾಗಿ ಬೈಕ್ ಓಡಿಸಿಕೊಂಡು ಬರುತ್ತಿದ್ದಾಗ ನಿಲ್ಲಿಸುವಂತೆ ಸೂಚನೆ ನೀಡಿದರೂ ನಿಲ್ಲಸದೇ ಇದ್ದಾಗ ಅನುಮಾನದಿಂದ ನಿಲ್ಲಿಸಿ ವಿಚಾರಣೆ ಮಾಡಿದ್ದೇವೆ. ಆದರೆ ಲಾಠಿ ಏಟು ನೀಡಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯಪಾನ ಮಾಡಿ ಕ್ಲಾಸ್ ಗೆ ಬಂದರೆಂದು ಪ್ರಿನ್ಸಿಪಾಲ್ ಬೈದಿದ್ದಕ್ಕೆ ಈ ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ?!