Select Your Language

Notifications

webdunia
webdunia
webdunia
webdunia

ಖಾಸಗಿ ಬಸ್ ಇದ್ದಕ್ಕಿದ್ದಂತೆ ಸುಟ್ಟು ಭಸ್ಮ: ಪ್ರಯಾಣಿಕರ ಗತಿಯೇನಾಯ್ತು ಅಂತ ಗೊತ್ತಾ?

ಖಾಸಗಿ ಬಸ್ ಇದ್ದಕ್ಕಿದ್ದಂತೆ ಸುಟ್ಟು ಭಸ್ಮ: ಪ್ರಯಾಣಿಕರ ಗತಿಯೇನಾಯ್ತು ಅಂತ ಗೊತ್ತಾ?
ಹೊಸೂರ , ಸೋಮವಾರ, 10 ಡಿಸೆಂಬರ್ 2018 (14:53 IST)
ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಖಾಸಗಿ ಬಸ್ ವೊಂದು ಏಕಾಏಕಿಯಾಗಿ ಬೆಂಕಿಯಿಂದ ಸಂಪೂರ್ಣ ಹೊತ್ತು ಉರಿದ ಘಟನೆ ನಡೆದಿದೆ.

ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಭಸ್ಮವಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ತಮಿಳುನಾಡಿನ ಹೊಸೂರು ಸಮೀಪ ನಡೆದಿದೆ. ಹೊಸೂರ -ಕೃಷ್ಣಗಿರಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ತಮಿಳುನಾಡಿನ ತೂಪುರ್ ಬಳಿ ಕೆ.ಪಿ.ಎನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಮಧುರೈನಿಂದ ಬೆಂಗಳೂರಿಗೆ ಬರುತ್ತಿತ್ತು.

ಈ ಸಮಯದಲ್ಲಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಚಾಲಕನ ಗಮನಕ್ಕೆ ಬಂದಿದೆ. ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ. ನಂತರ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಈ ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಗಳಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧರ್ಮದ ಪಟ್ಟ ಕಟ್ಟಿದ ಡಿಕೆಶಿಗೆ ಆರ್. ಅಶೋಕ್ ಟಾಂಗ್