Select Your Language

Notifications

webdunia
webdunia
webdunia
webdunia

ಬಯೋಕಾನ್ ಸಂಸ್ಥಾಪಕಿ ವಿರುದ್ಧ ಪ್ರತಿಭಟನೆ: ವಾಟಾಳ್ ನಾಗರಾಜ್ ಬಂಧನ, ಬಿಡುಗಡೆ

ಬಯೋಕಾನ್ ಸಂಸ್ಥಾಪಕಿ ವಿರುದ್ಧ ಪ್ರತಿಭಟನೆ: ವಾಟಾಳ್ ನಾಗರಾಜ್ ಬಂಧನ, ಬಿಡುಗಡೆ
ಬೆಂಗಳೂರು , ಬುಧವಾರ, 11 ಜುಲೈ 2018 (15:01 IST)
ಕನ್ನಡ ಹೋರಾಟಗಾರರು, ಸಾಹಿತಿಗಳ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಂದಾರ್ ಷಾ ವಿರುದ್ಧ ಇಂದು ಕನ್ನಡ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜ್ ಸೇರಿ ಹಲವರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆಗೊಳಿಸಿದರು. 

 
ಹೆಬ್ಬಗೋಡಿಯ ಬಯೋಕಾನ್ ಕಾರ್ಖಾನೆ ಮುಂಭಾಗದಲ್ಲಿ ಕನ್ನಡ ಒಕ್ಕೂಟಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವ ಷಾ ಕೂಡಲೇ ಕ್ಷಮೆ ಕೇಳಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಬಯೋಕಾನ್ ಸಂಸ್ಥೆಗೆ ಮುತ್ತಿಗೆ ಹಾಕಲು ಯತ್ನಿಸುವ ಸಂದರ್ಭದಲ್ಲಿ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಆ ಬಳಿಕ ಬಿಡುಗಡೆಗೊಳಿಸಿದರು. 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಕೆಡಿಪಿ ಸಭೆಯಲ್ಲಿ ಲವ್ ಯೂ ಎಂದು ಚಾಟ್ ಮಾಡಿದ ಅಧಿಕಾರಿ