Select Your Language

Notifications

webdunia
webdunia
webdunia
webdunia

ರೈತರ ಮೇಲೆ ಕಲ್ಲು ತೂರಾಟ ಖಂಡಿಸಿ ವಿವಿಧೆಡೆ ಪ್ರತಿಭಟನೆ

ರೈತರ ಮೇಲೆ ಕಲ್ಲು ತೂರಾಟ ಖಂಡಿಸಿ ವಿವಿಧೆಡೆ ಪ್ರತಿಭಟನೆ
ಬೆಳಗಾವಿ , ಮಂಗಳವಾರ, 13 ನವೆಂಬರ್ 2018 (19:16 IST)
ರೈತರ ಮೇಲೆ ಕಲ್ಲು ತೂರಾಟ ಖಂಡಿಸಿ ವಿವಿಧೆಡೆ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ಜಿಲ್ಲೆಯ ಉಗಾರ ಖುರ್ದ್, ಕಾಗವಾಡ, ಐನಾಪುರ ಸೇರಿ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವಿವಿಧ ಪಟ್ಟಣ, ಗ್ರಾಮಗಳಲ್ಲಿ ಪ್ರತಿಭಟನೆ ನಡೆಯಿತು. ಟೈರ್ ಗೆ ಬೆಂಕಿ‌ ಹಚ್ಚಿ, ರಸ್ತೆ ತಡೆ ನಡೆಸಿ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಸ್ವಾಭಿಮಾನಿ ಶೇತ್ಕರಿ ಸಂಘಟನೆ, ರೈತ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆದವು.

ಕಬ್ಬಿಗೆ ಯೋಗ್ಯ ಬೆಲೆ ನೀಡುವಂತೆ, ಬಾಕಿ ಬಿಲ್ ಪಾವತಿಗೆ ಒತ್ತಾಯ ಮಾಡಿ, ನಿನ್ನೆ ಸಂಜೆ ಉಗಾರ ಖುರ್ದ್ ಪಟ್ಟಣದಲ್ಲಿ ಪ್ರತಿಭಟನಾ ಸಭೆಯಲ್ಲಿ ಕಲ್ಲೆಸೆತವಾಗಿದೆ. ಕಲ್ಲೆಸತದಿಂದ ತೀವ್ರ ಗಾಯಗೊಂಡ ರೈತ ಅಜಿತ ಅಕ್ಕಿವಾಟೆ ಮೇಲೆ ಕಲ್ಲೆಸೆದ ದುಷ್ಕರ್ಮಿಗಳನ್ನು ಬಂಧನ ಮಾಡುವಂತೆ ಒತ್ತಾಯ ಮಾಡಲಾಯಿತು.  
ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಮಮಂದಿರ ನಿರ್ಮಾಣದ ಸುಗ್ರೀವಾಜ್ಞೆ ಹೊರಡಿಸಲು ಒತ್ತಾಯ