Select Your Language

Notifications

webdunia
webdunia
webdunia
webdunia

ಪಿಎಸ್‌ಐ ನಿಂದನೆ ಪ್ರಕರಣ: ಯಾರಿಗೂ ಧಮ್ಕಿ ಹಾಕಿಲ್ಲ ಎಂದ ಸಂಸದ ಡಿ.ಕೆ.ಸುರೇಶ್

ಪಿಎಸ್‌ಐ ನಿಂದನೆ ಪ್ರಕರಣ: ಯಾರಿಗೂ ಧಮ್ಕಿ ಹಾಕಿಲ್ಲ ಎಂದ ಸಂಸದ ಡಿ.ಕೆ.ಸುರೇಶ್
ಬೆಂಗಳೂರು , ಶುಕ್ರವಾರ, 26 ಆಗಸ್ಟ್ 2016 (11:08 IST)
ಅತ್ತಿಬೆಲೆ ಪಿಎಸ್‌ಐ ಶ್ರೀನಿವಾಸ್ ಅವರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾರಿಗೂ ಧಮ್ಕಿ ಹಾಕಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. 
 
ನಾನು ಯಾವುದೇ ಅಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಧಮ್ಕಿ ನೀಡಿಲ್ಲ. ನನ್ನ ಕೇತ್ರದ ಕಾನೂನು ಸುವ್ಯವಸ್ಥೆ ಕುರಿತು ದೂರು ಬಂದಿತ್ತು. ಹೀಗಾಗೆ ಅಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಚರ್ಚೆ ನಡೆಸಿದ್ದೇನೆ. ನನಗೆ ಪಿಎಸ್‌‌ಐ ಶ್ರೀನಿವಾಸ್ ಕುರಿತು ಮಾಹಿತಿ ಇಲ್ಲ. ಆದರೂ ಸಹ ಅವರು ನನ್ನ ವಿರುದ್ಧ ದೂರು ನೀಡಿದ್ದಾರೆ. ನಾನು ಯಾವುದೇ ತನಿಖೆಗೂ ಸಿದ್ಧ ಎಂದು ತಿಳಿಸಿದರು.
 
ಅತ್ತಿಬೆಲೆ ಪಿಎಸ್‌ಐ ಶ್ರೀನಿವಾಸ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು 'ವಸೂಲಿ ರಾಜ' ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ಶ್ರೀನಿವಾಸ್ ಅವರು ದೂರು ನೀಡಲು ಅನುಮತಿ ನೀಡಿ ಎಂದು ಎಸ್‌ಪಿ ಅಮಿತ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

4 ಜಿ ಸ್ಮಾರ್ಟ್‌ಫೋನ್ ಬಳಕೆ; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಆಸಾರಾಮ್ ಬಾಪು