Select Your Language

Notifications

webdunia
webdunia
webdunia
webdunia

ಸಿಬಿಐ ತನಿಖೆಗೆ ವಹಿಸಲು ಕೋರಿ ರೌಡಿಶೀಟರ್ ನಾಗ ಹೈಕೋರ್ಟ್‌ಗೆ ಅರ್ಜಿ

ಸಿಬಿಐ ತನಿಖೆಗೆ ವಹಿಸಲು ಕೋರಿ ರೌಡಿಶೀಟರ್ ನಾಗ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು , ಗುರುವಾರ, 6 ಜುಲೈ 2017 (15:48 IST)
ನಾನೊಬ್ಬ ಸಾಮಾಜಿಕ ಕಾರ್ಯಕರ್ತ, ರಾಜಕಾರಣಿ, ಪೊಲೀಸರು ನನ್ನ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಮಾನಹಾನಿ ಮಾಡುತ್ತಿದ್ದಾರೆ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರೌಡಿಶೀಟರ್ ನಾಗರಾಜ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
 
ನನ್ನ ಮನೆ ಹಾಗೂ ಟ್ರಸ್ಟ್ ಮೇಲೆ ಪೊಲೀಸರು ದಾಳಿ ನಡೆಸಿರುವ ಪ್ರಕರಣನ್ನು ಸಿಬಿಐ ತನಿಖೆಗೆ ವಹಿಸಬೇಕು. ಪೊಲೀಸರ ಕ್ರಮದಿಂದ ಸಮಾಜದಲ್ಲಿ ತಲೆತಗ್ಗಿಸುವಂತಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ಪೊಲೀಸರು ಅನಗತ್ಯವಾಗಿ ನನಗೆ ಕಿರುಕುಳ ನೀಡುತ್ತಿದ್ದಾರೆ. ಒಂದರ ನಂತರ ಮತ್ತೊಂದು ಕೇಸ್ ದಾಖಲಿಸುತ್ತಿದ್ದಾರೆ. ನನಗೂ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
 
ಕೆಲ ತಿಂಗಳುಗಳ ಹಿಂದೆ ಪೊಲೀಸರು ರೌಡಿಶೀಟರ್ ನಾಗ್ ನಿವಾಸದ ಮೇಲೆ ದಾಳಿ ನಡೆಸಿದಾಗ ಕೋಟಿ ಕೋಟಿ ರೂಪಾಯಿ ಹಳೆನೋಟುಗಳು ಪತ್ತೆಯಾಗಿದ್ದನ್ನು ಸ್ಮರಿಸಬಹುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ಸಿಟ್ಟಿಗೆ 4 ಕಾರಣ: ಎಂ.ಬಿ.ಪಾಟೀಲ್