Select Your Language

Notifications

webdunia
webdunia
webdunia
webdunia

ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ ಜಪ್ತಿ ಕೇಸ್; ಸಚಿವರ ಹಸ್ತಕ್ಷೇಪ ಇಲ್ಲ ಎಂದ ಸಚಿವ ಶಿವಳ್ಳಿ

ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ ಜಪ್ತಿ ಕೇಸ್; ಸಚಿವರ ಹಸ್ತಕ್ಷೇಪ ಇಲ್ಲ ಎಂದ ಸಚಿವ ಶಿವಳ್ಳಿ
ಕೊಪ್ಪಳ , ಶನಿವಾರ, 12 ಜನವರಿ 2019 (12:19 IST)
ಕೊಪ್ಪಳ : ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ ಜಪ್ತಿ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣ ತನಿಖೆ ನಡೆಸಲಾಗುತ್ತದೆ ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಹೇಳಿದ್ದಾರೆ.


ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಸಿ.ಪುಟ್ಟರಂಗಶೆಟ್ಟಿ ಕಚೇರಿಯ ಸಿಬ್ಬಂದಿ ತಪ್ಪು ಮಾಡಿದ್ದಾನೆ. ಆದರೆ ಈ ಪ್ರಕರಣದಲ್ಲಿ ಸಚಿವರ ಹಸ್ತಕ್ಷೇಪ ಇಲ್ಲ. ಯಾರೇ ತಪ್ಪು ಮಾಡಿದ್ರು ತನಿಖೆ ನಂತರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.


ಹಾಗೇ ‘6 ತಿಂಗಳಲ್ಲಿ ಮೈತ್ರಿ ಸರ್ಕಾರ ಬೀಳುತ್ತೆ ಎಂದು ಹೇಳ್ತಿದ್ದಾರೆ. ಆದ್ರೆ 5 ವರ್ಷ ಸಮ್ಮಿಶ್ರ ಸರ್ಕಾರಕ್ಕೆ ಏನೂ ಆಗುವುದಿಲ್ಲ’ ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಅಧಿಕಾರಿಗಳ ಮೇಲೆ ಬಿಜೆಪಿ ಶಾಸಕ ಅರಗಜ್ಞಾನೇಂದ್ರ ದರ್ಪ