Select Your Language

Notifications

webdunia
webdunia
webdunia
webdunia

ಸತೀಶ್ ಜಾರಕಿಹೊಳಿ- ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೆ ಕೊಲ್ಡ ವಾರ್

ಸತೀಶ್ ಜಾರಕಿಹೊಳಿ- ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೆ ಕೊಲ್ಡ ವಾರ್
ಬೆಳಗಾವಿ , ಶನಿವಾರ, 1 ಡಿಸೆಂಬರ್ 2018 (19:00 IST)
ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಒಂದೊಮ್ಮೆ ರಾಜ್ಯದ ಗಮನ ಸೆಳೆದಿದ್ದ ಶಾಸಕ ಸತೀಶ್ ಜಾರಕಿಹೊಳಿ- ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೆ ಕೊಲ್ಡ ವಾರ್ ಶುರುವಾಗಿದೆ.

ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಇಬ್ಬರಲ್ಲಿ ಕೋಲ್ಡ್ ವಾರ್ ನಡಿತಾಯಿದೆ. ಕಳೆದ ಒಂದು ವಾರದ ಹಿಂದೆ ಸುವರ್ಣ ಸೌಧದ ಎದುರು ಹತ್ತು ಹೊಸ ಬಸ್ ಗಳಿಗೆ ಶಾಸಕಿ ಲಕ್ಷ್ಮೀ ಚಾಲನೆ ನೀಡಿದ್ದರು. ಗ್ರಾಮೀಣ ಕ್ಷೇತ್ರಗಳಿಗೆ ಓಡಾಡಲು ಬಸ್ ಸೇವೆಗೆ ಚಾಲನೆ ನೀಡಿದ್ದರು.

ಇದರ ಬೆನ್ನಲ್ಲೇ ಹೊಸ ಬಸ್ ಗಳಿಗೆ ಶಾಸಕ ಸತೀಶ್ ಜಾರಕಿಹೊಳಿ‌ ಚಾಲನೆ ಕೊಟ್ಟಿದ್ದಾರೆ.
ಬೆಳಗಾವಿಯ ಸಿಟಿ ಬಸ್ ನಿಲ್ದಾಣದಲ್ಲಿ ಹತ್ತು ಬಸ್ ಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಶಾಸಕಿ ಬಿಡಿಸಿದ ಹತ್ತು ಬಸ್ ಗಳಷ್ಟೇ ತನ್ನ ಕ್ಷೇತ್ರಕ್ಕೂ ಬಿಡಿಸಿದ ಶಾಸಕ ಕುತೂಹಲ ಮೂಡಿಸಿದ್ದಾರೆ.

ಈ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಕಾಮಗಾರಿಯಲ್ಲಿ, ಅಭಿವೃದ್ಧಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಸೆಡ್ಡು ಹೊಡೆಯುತ್ತಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಪಿ ಮನೆ ಎದುರಲ್ಲೇ ಪೇದೆ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ?