Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಪದ್ಮರಾಜ್ ರಾಮಯ್ಯ

Padmaraj Ramaiah

Sampriya

ಮಂಗಳೂರು , ಗುರುವಾರ, 21 ಮಾರ್ಚ್ 2024 (11:53 IST)
Photo Courtesy Facebook
ಮಂಗಳೂರು: ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೇ ರಂಗೇರುತ್ತಿದ್ದು, ಕಾಂಗ್ರೆಸ್ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನಿಂದ ಫೈನಲ್ ಆಗಿರುವ ಸ್ಪರ್ಧಿ ವಕೀಲ ಪದ್ಮರಾಜ್ ರಾಮಯ್ಯ ಅವರು ಇದೀಗ ಕ್ಷೇತ್ರದ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ‌

ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಗ್ಗೆ ಪದ್ಮರಾಜ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಾಲಮೇಳದ ಹರಿಕಾರ, ಕೇಂದ್ರದ ಮಾಜಿ ವಿತ್ತ ಸಚಿವರು, ಮಂಗಳೂರು ದಸರಾದ ರೂವಾರಿ, ಕಾಂಗ್ರೆಸ್ಸಿನ ಹಿರಿಯ ಮುತ್ಸದ್ದಿ ನನ್ನ ರಾಜಕೀಯ ಗುರುಗಳಾದ ಸನ್ಮಾನ್ಯ ಬಿ.ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದೆ ಎಂದು ಬರೆದುಕೊಂಡಿದ್ದಾರೆ.

ನನ್ನ ಮಾರ್ಗದರ್ಶಕರಾದ ಮಾಜಿ ಸಚಿವರಾದ ಶ್ರೀಯುತ ಬಿ. ರಮಾನಾಥ್ ರೈಯವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿ, ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೆನ್ನೈನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾದ ಎಚ್‌ಡಿ ಕುಮಾರಸ್ವಾಮಿ