Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಹೇಳಿಕೆ ವಿಚಾರ; ಸಚಿವ ಸ್ಥಾನಕ್ಕಾಗಿ ಶಾಸಕರು ಈ ರೀತಿ ಹೇಳುತ್ತಿದ್ದಾರೆ ಎಂದ ಸಚಿವ

ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಹೇಳಿಕೆ ವಿಚಾರ; ಸಚಿವ ಸ್ಥಾನಕ್ಕಾಗಿ ಶಾಸಕರು  ಈ ರೀತಿ ಹೇಳುತ್ತಿದ್ದಾರೆ ಎಂದ ಸಚಿವ
ಮೈಸೂರು , ಶುಕ್ರವಾರ, 22 ಫೆಬ್ರವರಿ 2019 (12:46 IST)
ಮೈಸೂರು : ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಅಂದರೆ 2019ರಲ್ಲೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಬಸವಕಲ್ಯಾಣ ಶಾಸಕ ಬಿ ನಾರಾಯಣ್ ರಾವ್ ಅವರು ಹೇಳಿದ್ದರು. ಈ ಬಗ್ಗೆ ಮಾತನಾಡಿದ ಸಚಿವ ಸಾ.ರಾ.ಮಹೇಶ್ ಅವರು, ‘ಸಚಿವ ಸ್ಥಾನ, ನಿಗಮ ಮಂಡಳಿ ಪಡೆದುಕೊಳ್ಳುವ ಉದ್ದೇಶದಿಂದ ಓಲೈಸಲು ಆ ಶಾಸಕ ಈ ರೀತಿಯ ಹೇಳಿಕೆ ನೀಡುತ್ತಿದ್ದಾನೆ. ನಾವು ಅವರಂತೆ ಮಾತನಾಡಬಾರದು’ ಎಂದು ವ್ಯಂಗ್ಯವಾಡಿದ್ದಾರೆ.

 

ಅಲ್ಲದೇ ‘ನಮ್ಮ ರಾಜ್ಯ ರಾಷ್ಟ್ರದ ನಾಯಕರು ಯಾವುದೇ ವಿಚಾರವಿದ್ದರೂ ಪಕ್ಷದ ವೇದಿಕೆಯಲ್ಲಿ ಮಾತುಕತೆ ನಡೆಸಬೇಕು. ಬಹಿರಂಗವಾಗಿ ಬೇಡ ಎಂದು ಸೂಚನೆಯನ್ನ ಕೊಟ್ಟಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಆಪರೇಷನ್ ಕಮಲದ ಆಡಿಯೋ ಪ್ರಕರಣ; ಕಲಬುರಗಿಯ ಹೈಕೋರ್ಟ್ ನಿಂದ ತೀರ್ಪು ಪ್ರಕಟ