Select Your Language

Notifications

webdunia
webdunia
webdunia
webdunia

ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗುತ್ತೆ ಎಂದ ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗುತ್ತೆ ಎಂದ ಸಿದ್ದರಾಮಯ್ಯ
ಹುಬ್ಬಳ್ಳಿ , ಭಾನುವಾರ, 18 ನವೆಂಬರ್ 2018 (20:53 IST)
ಸಮ್ಮಿಶ್ರ ಸರಕಾರದಲ್ಲಿ ಸಚಿವ ಸಂಪುಟ ಶೀಘ್ರದಲ್ಲಿಯೇ ವಿಸ್ತರಣೆ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಐದು ರಾಜ್ಯಗಳ ಚುನಾವಣೆ ನಡೆಯುತ್ತಿರೋದ್ರಿಂದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರ ಭೇಟಿ ನಂತರ ಸಂಪುಟ ವಿಸ್ತರಣೆ ಬಗ್ಗೆ ಫೈನಲ್ ಆಗುತ್ತೆ‌ ಎಂದಿದ್ದಾರೆ.

ಸಿಬಿಐಯನ್ನ ಕೇಂದ್ರ ಸರ್ಕಾರ ದುರುಪಯೋಗ ಮಾಡುತ್ತಿದೆ. ನಮ್ಮ ರಾಜ್ಯದಲ್ಲಿ ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಂಡೆ ಸಿಬಿಐ ವಿಚಾರಣೆ ನಡಸಬೇಕು. ಅದು ಬಹಳ ವರ್ಷಗಳ ಹಿಂದೆಯೇ ನಮ್ಮಲ್ಲಿ ಅದನ್ನು ಜಾರಿ ಮಾಡಿದ್ದೇವೆ ಎಂದರು. ಇನ್ನು ಇಂದಿರಾ ಕ್ಯಾಂಟಿನ್ ನಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬಂದು ಬಿಡುತ್ತೆ ಎಂದು ಬಿಜೆಪಿಯವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ ಬ್ಲಾಕ್