Select Your Language

Notifications

webdunia
webdunia
webdunia
webdunia

ಮತ್ತೆ ನಾನೇ ಸಿಎಂ ಎಂದ ಸಿದ್ದರಾಮಯ್ಯ! ಅದಕ್ಕೆ ಸ್ಪಷ್ಟನೆಯನ್ನೂ ಕೊಟ್ಟಿದ್ದು ಹೀಗೆ!

ಮತ್ತೆ ನಾನೇ ಸಿಎಂ ಎಂದ ಸಿದ್ದರಾಮಯ್ಯ! ಅದಕ್ಕೆ ಸ್ಪಷ್ಟನೆಯನ್ನೂ ಕೊಟ್ಟಿದ್ದು ಹೀಗೆ!
ಹುಬ್ಬಳ್ಳಿ , ಬುಧವಾರ, 29 ಆಗಸ್ಟ್ 2018 (10:04 IST)
ಹುಬ್ಬಳ್ಳಿ: ಮೊನ್ನೆಯಷ್ಟೇ ಮುಂದಿನ ಸಿಎಂ ನಾನೇ ಎಂದು ಮೈತ್ರಿ ಸರ್ಕಾರದಲ್ಲಿ ತಳಮಳ ಸೃಷ್ಟಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

‘ಮತ್ತೆ ನಾನೇ ಸಿಎಂ ಆಗುತ್ತೇನೆ. ಇದರಲ್ಲಿ ಯಾವ ಸಂಶಯವೂ ಬೇಡ’ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಆದರೆ ಈಗಿನ ಮೈತ್ರಿ ಸರ್ಕಾರಕ್ಕೆ ತೊಂದರೆಯಿಲ್ಲ. ಈ ಸರ್ಕಾರ ಭದ್ರವಾಗಿದೆ. ಬಿಜೆಪಿಯವರು ಹೇಳುವಂತೆ ಯಾವುದೇ ರೀತಿಯಲ್ಲಿ ಈ ಸರ್ಕಾರ ಮುರಿದು ಬೀಳಲ್ಲ. ನಾನು ಮತ್ತೆ ಸಿಎಂ ಆಗುವ ವಿಚಾರ ಸಮನ್ವಯ ಸಮಿತಿಯಲ್ಲೂ ಚರ್ಚೆಯಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳ ಪ್ರವಾಸದಲ್ಲಿ ಒಂದು ಒಳ್ಳೆಯ ಕೆಲಸ ಮಾಡಿದ ರಾಹುಲ್ ಗಾಂಧಿ